ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.
ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…