ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.
ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…