ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.
ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…