ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.
ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…