ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.
ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…