MIRROR FOCUS

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

Share

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ  ಸಾಧಾರಣ  ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ  ಭಾರೀ ಪ್ರಮಾಣದಲ್ಲಿ  ಮಂಜು ಬೀಳುತ್ತಿದೆ.  ಗುಲ್ಮಾರ್ಗ್, ಸೋನಾಮಾರ್ಗ್  ಮತ್ತು ಪೆಹೆಲ್ಗಾಮ್ ನಲ್ಲಿ  ಭಾರೀ ಪ್ರಮಾಣದಲ್ಲಿ  ಮಂಜು  ಬೀಳುತ್ತಿದ್ದು,  ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬಂಡೀಪೋರ  ಜಿಲ್ಲೆಯ  ಗುರೇಸ್ , ಕುಪ್ವಾರದ  ಹಲವು ಪ್ರದೇಶಗಳಲ್ಲೂ  ಭಾರೀ ಪ್ರಮಾಣದಲ್ಲಿ  ಹಿಮ ಬೀಳುತ್ತಿದ್ದು,  ಜನವಸತಿ ಹಾಗೂ  ಅರಣ್ಯಗಳ ಮೇಲೆ  ಮಂಜಿನ ಹೊದಿಕೆ ಹಾಸಿಕೊಂಡಂತೆ  ತೋರುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ   ಕಣಿವೆ ರಾಜ್ಯದಲ್ಲಿ   ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು  ಹವಾಮಾನ ಇಲಾಖೆ  ಸಹ ತಿಳಿಸಿದೆ. ………ಮುಂದೆ ಓದಿ……..

ಇದೇ ವೇಳೆ ಮಹಾರಾಷ್ಟ್ರ ಸೇರಿದಂತೆ  ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆಯಾಗುತ್ತಿದೆ.  ಮಹಾರಾಷ್ಟ್ರದ  ಚಂದ್ರಾಪುರದಲ್ಲಿ  ನಿನ್ನೆ  41.4 ಡಿಗ್ರಿ ಸೆಲ್ಸಿಯಸ್ , ಗರಿಷ್ಠ ತಾಪಮಾನ ದಾಖಲಾಗಿತ್ತು.  ಮುಂದಿನ 2 ದಿನಗಳಲ್ಲಿ  ವಿದರ್ಭ ಪ್ರದೇಶದಲ್ಲಿ  ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ..

ಅಕೋಲಾ, ಚಂದ್ರಾಪುರ, ಯವತ್ನಾಳ್ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್  ಹಾಗೂ  ವಾದ್ರಾ, ನಾಗಪುರ, ಅಮರಾವತಿ ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲ್ಲಾಪುರ ಜಿಲ್ಲೆಯ ಅಶುವಾಡಿ ಮತ್ತು ಅಜ್ರಾ ತಾಲೂಕುಗಳಲ್ಲಿ  ದಿಢೀರ್ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ  ತಂಪೆರಂತಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

46 minutes ago

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

2 hours ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ…

3 hours ago

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…

3 hours ago

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

9 hours ago