MIRROR FOCUS

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ  ಸಾಧಾರಣ  ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ  ಭಾರೀ ಪ್ರಮಾಣದಲ್ಲಿ  ಮಂಜು ಬೀಳುತ್ತಿದೆ.  ಗುಲ್ಮಾರ್ಗ್, ಸೋನಾಮಾರ್ಗ್  ಮತ್ತು ಪೆಹೆಲ್ಗಾಮ್ ನಲ್ಲಿ  ಭಾರೀ ಪ್ರಮಾಣದಲ್ಲಿ  ಮಂಜು  ಬೀಳುತ್ತಿದ್ದು,  ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬಂಡೀಪೋರ  ಜಿಲ್ಲೆಯ  ಗುರೇಸ್ , ಕುಪ್ವಾರದ  ಹಲವು ಪ್ರದೇಶಗಳಲ್ಲೂ  ಭಾರೀ ಪ್ರಮಾಣದಲ್ಲಿ  ಹಿಮ ಬೀಳುತ್ತಿದ್ದು,  ಜನವಸತಿ ಹಾಗೂ  ಅರಣ್ಯಗಳ ಮೇಲೆ  ಮಂಜಿನ ಹೊದಿಕೆ ಹಾಸಿಕೊಂಡಂತೆ  ತೋರುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ   ಕಣಿವೆ ರಾಜ್ಯದಲ್ಲಿ   ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು  ಹವಾಮಾನ ಇಲಾಖೆ  ಸಹ ತಿಳಿಸಿದೆ. ………ಮುಂದೆ ಓದಿ……..

Advertisement

ಇದೇ ವೇಳೆ ಮಹಾರಾಷ್ಟ್ರ ಸೇರಿದಂತೆ  ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆಯಾಗುತ್ತಿದೆ.  ಮಹಾರಾಷ್ಟ್ರದ  ಚಂದ್ರಾಪುರದಲ್ಲಿ  ನಿನ್ನೆ  41.4 ಡಿಗ್ರಿ ಸೆಲ್ಸಿಯಸ್ , ಗರಿಷ್ಠ ತಾಪಮಾನ ದಾಖಲಾಗಿತ್ತು.  ಮುಂದಿನ 2 ದಿನಗಳಲ್ಲಿ  ವಿದರ್ಭ ಪ್ರದೇಶದಲ್ಲಿ  ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ..

ಅಕೋಲಾ, ಚಂದ್ರಾಪುರ, ಯವತ್ನಾಳ್ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್  ಹಾಗೂ  ವಾದ್ರಾ, ನಾಗಪುರ, ಅಮರಾವತಿ ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲ್ಲಾಪುರ ಜಿಲ್ಲೆಯ ಅಶುವಾಡಿ ಮತ್ತು ಅಜ್ರಾ ತಾಲೂಕುಗಳಲ್ಲಿ  ದಿಢೀರ್ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ  ತಂಪೆರಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

8 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

16 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

17 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago