Advertisement
MIRROR FOCUS

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

Share

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ  ಸಾಧಾರಣ  ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ  ಭಾರೀ ಪ್ರಮಾಣದಲ್ಲಿ  ಮಂಜು ಬೀಳುತ್ತಿದೆ.  ಗುಲ್ಮಾರ್ಗ್, ಸೋನಾಮಾರ್ಗ್  ಮತ್ತು ಪೆಹೆಲ್ಗಾಮ್ ನಲ್ಲಿ  ಭಾರೀ ಪ್ರಮಾಣದಲ್ಲಿ  ಮಂಜು  ಬೀಳುತ್ತಿದ್ದು,  ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬಂಡೀಪೋರ  ಜಿಲ್ಲೆಯ  ಗುರೇಸ್ , ಕುಪ್ವಾರದ  ಹಲವು ಪ್ರದೇಶಗಳಲ್ಲೂ  ಭಾರೀ ಪ್ರಮಾಣದಲ್ಲಿ  ಹಿಮ ಬೀಳುತ್ತಿದ್ದು,  ಜನವಸತಿ ಹಾಗೂ  ಅರಣ್ಯಗಳ ಮೇಲೆ  ಮಂಜಿನ ಹೊದಿಕೆ ಹಾಸಿಕೊಂಡಂತೆ  ತೋರುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ   ಕಣಿವೆ ರಾಜ್ಯದಲ್ಲಿ   ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು  ಹವಾಮಾನ ಇಲಾಖೆ  ಸಹ ತಿಳಿಸಿದೆ. ………ಮುಂದೆ ಓದಿ……..

ಇದೇ ವೇಳೆ ಮಹಾರಾಷ್ಟ್ರ ಸೇರಿದಂತೆ  ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆಯಾಗುತ್ತಿದೆ.  ಮಹಾರಾಷ್ಟ್ರದ  ಚಂದ್ರಾಪುರದಲ್ಲಿ  ನಿನ್ನೆ  41.4 ಡಿಗ್ರಿ ಸೆಲ್ಸಿಯಸ್ , ಗರಿಷ್ಠ ತಾಪಮಾನ ದಾಖಲಾಗಿತ್ತು.  ಮುಂದಿನ 2 ದಿನಗಳಲ್ಲಿ  ವಿದರ್ಭ ಪ್ರದೇಶದಲ್ಲಿ  ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ..

ಅಕೋಲಾ, ಚಂದ್ರಾಪುರ, ಯವತ್ನಾಳ್ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್  ಹಾಗೂ  ವಾದ್ರಾ, ನಾಗಪುರ, ಅಮರಾವತಿ ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲ್ಲಾಪುರ ಜಿಲ್ಲೆಯ ಅಶುವಾಡಿ ಮತ್ತು ಅಜ್ರಾ ತಾಲೂಕುಗಳಲ್ಲಿ  ದಿಢೀರ್ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ  ತಂಪೆರಂತಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

16 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

16 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

17 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago