ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ ಸಾಧಾರಣ ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಂಜು ಬೀಳುತ್ತಿದೆ. ಗುಲ್ಮಾರ್ಗ್, ಸೋನಾಮಾರ್ಗ್ ಮತ್ತು ಪೆಹೆಲ್ಗಾಮ್ ನಲ್ಲಿ ಭಾರೀ ಪ್ರಮಾಣದಲ್ಲಿ ಮಂಜು ಬೀಳುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬಂಡೀಪೋರ ಜಿಲ್ಲೆಯ ಗುರೇಸ್ , ಕುಪ್ವಾರದ ಹಲವು ಪ್ರದೇಶಗಳಲ್ಲೂ ಭಾರೀ ಪ್ರಮಾಣದಲ್ಲಿ ಹಿಮ ಬೀಳುತ್ತಿದ್ದು, ಜನವಸತಿ ಹಾಗೂ ಅರಣ್ಯಗಳ ಮೇಲೆ ಮಂಜಿನ ಹೊದಿಕೆ ಹಾಸಿಕೊಂಡಂತೆ ತೋರುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕಣಿವೆ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸಹ ತಿಳಿಸಿದೆ. ………ಮುಂದೆ ಓದಿ……..
ಇದೇ ವೇಳೆ ಮಹಾರಾಷ್ಟ್ರ ಸೇರಿದಂತೆ ಮಧ್ಯಭಾರತ ಹಾಗೂ ಉತ್ತರ ಭಾರತದಲ್ಲಿ ತಾಪಮಾನ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಿನ್ನೆ 41.4 ಡಿಗ್ರಿ ಸೆಲ್ಸಿಯಸ್ , ಗರಿಷ್ಠ ತಾಪಮಾನ ದಾಖಲಾಗಿತ್ತು. ಮುಂದಿನ 2 ದಿನಗಳಲ್ಲಿ ವಿದರ್ಭ ಪ್ರದೇಶದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ..
ಅಕೋಲಾ, ಚಂದ್ರಾಪುರ, ಯವತ್ನಾಳ್ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಹಾಗೂ ವಾದ್ರಾ, ನಾಗಪುರ, ಅಮರಾವತಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲ್ಲಾಪುರ ಜಿಲ್ಲೆಯ ಅಶುವಾಡಿ ಮತ್ತು ಅಜ್ರಾ ತಾಲೂಕುಗಳಲ್ಲಿ ದಿಢೀರ್ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪೆರಂತಾಗಿದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…