53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದ ಫೇಸ್‌ಬುಕ್ …! |

June 3, 2022
6:38 PM

ಸಾಮಾಜಿಕ ಜಾಲತಾಣಗಳ ಬಳಕೆ ಈಚೆಗೆ ಹೆಚ್ಚಾಗಿದೆ. ಅದರಲ್ಲೂ ಪೇಸ್‌ಬುಕ್‌, ಟ್ವಿಟ್ಟರ್‌,ಇನ್‌ಸ್ಟಾಗ್ರಾಂ ಬಳಕೆಯಲ್ಲಿ ಯುವಜನತೆ ಮುಂದಿದ್ದಾರೆ. ಇಂದಿನ ಬಹುತೇಕ ಚರ್ಚೆಗಳೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದು ಬಹಿರಂಗ ಚರ್ಚೆಗೆ ಕಾರಣವಾಗುತ್ತಿದೆ. ಅದರಲ್ಲೂ ದ್ವೇಷ ಭಾಷಣ, ಚರ್ಚೆ, ಅತ್ಯಂತ ಕೆಟ್ಟ ಪದಪ್ರಯೋಗಗಳೂ ಇಲ್ಲೇ ಆಗುತ್ತವೆ. ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಎಪ್ರಿಲ್‌ನಲ್ಲಿ ಫೇಸ್‌ಬುಕ್  53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ ಹಾಗೂ ಕ್ರಮ ಕೈಗೊಂಡಿದೆ.

ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಈಚೆಗೆ  ಫೇಸ್‌ಬುಕ್‌ ಬಳಕೆ ಹೆಚ್ಚಾಗಿದೆ. ಅದರ ಜೊತೆಗೆ ಸುಮಾರು 37.82 ರಷ್ಟು ಫೇಸ್‌ಬುಕ್‌ ನಲ್ಲಿ ಹಾಗೂ ಶೇಕಡಾ 86 ರಷ್ಟು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂಸಾತ್ಮಕ ಮತ್ತು ಪ್ರಚೋದಿಸುವ ವಿಷಯಗಳು ನಡೆದಿದೆ. ಮೇ 31 ರಂದು ಬಿಡುಗಡೆಯಾದ ವರದಿಯ ಪ್ರಕಾರ, ಫೇಸ್‌ಬುಕ್ ಏಪ್ರಿಲ್‌ನಲ್ಲಿ 53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ, ಇದು ಮಾರ್ಚ್‌ನಲ್ಲಿ ಪತ್ತೆಯಾದ 38,600 ಕ್ಕೆ ಹೋಲಿಸಿದರೆ 37.82 ಶೇಕಡಾ ಹೆಚ್ಚಾಗಿದೆ.

ಮಾರ್ಚ್‌ನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ‌ 41,300 ಹಿಂಸಾಚಾರ ಮತ್ತು ಪ್ರಚೋದನೆ-ಸಂಬಂಧಿತ ವಿಷಯ ವರದಿಯಾಗಿತ್ತು.  ಏಪ್ರಿಲ್‌ನಲ್ಲಿ 77,000 ಪ್ರಕರಣ ವರದಿಯಾಗಿದೆ.

ಅದರ ಜೊತೆಗೆ ಆತ್ಮಹತ್ಯೆ ಮತ್ತು ಗಾಯಗಳ ವರದಿಯೂ ಏರಿಕೆ ಕಂಡಿದ್ದು 7.15 ಲಕ್ಷ ಪ್ರಕರಣ ವರದಿಯಾಗಿದೆ.ಅಪಾಯಕಾರಿ ಸಂಘಟನೆ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿ 85 ಸಾವಿರ ಪ್ರಕರಣ ದಾಖಲಾಗಿದೆ. ಅಪಾಯಕಾರಿ ಸಂಘಟನೆ ಹಾಗೂ ಸಂಸ್ಥೆಗಳು, ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿ 1.13 ಲಕ್ಷ ಪ್ರಕರಣವನ್ನು ಪೇಸ್‌ ಬುಕ್‌ ಪತ್ತೆ ಮಾಡಿದೆ. ಇದರ ಜೊತೆಗೆ ಲೈಂಗಿಕ ಪ್ರಕರಣ, ಮಕ್ಕಳಿಗೆ ಕಿರುಕುಳ, ಮಕ್ಕಳ ದುರ್ಬಳಕೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿ ನಡೆದಿದ್ದು  ಅಂತಹ ಘಟನೆಗಳನ್ನು ಪತ್ತೆ ಮಾಡಿದ ಪೇಸ್‌ ಬುಕ್‌ ತಕ್ಷಣವೇ ಕ್ರಮ ಕೈಗೊಂಡಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror