ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….
ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…