ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….
ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…