ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….
ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…