ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….
ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…