ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….
ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…