Advertisement
ಸುದ್ದಿಗಳು

ಕಾನೂನು ಸುವ್ಯವಸ್ಥೆ ಕಾಪಾಡಲು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಅಗತ್ಯ | ಶಾಂತಿ ಸಭೆಯಲ್ಲಿ ಪ್ರಸ್ತಾಪವಾದ “ಸಾಮಾಜಿಕ ಜಾಲತಾಣದ ಸಮಸ್ಯೆ” |

Share

ಕಾನೂನು ಸುವ್ಯವಸ್ಥೆ ಕಾಪಾಡಲು ಇಂದು ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಅಗತ್ಯವಿದೆ. ಅದರ ಜೊತೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ ಬಿತ್ತರಿಸುವ ಸುದ್ದಿಗಳಿಗೆ ತಡೆ ಒಡ್ಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶನಿವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಹಲವು ನಾಗರೀಕರು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಾಗ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಚಾರಕ್ಕೆ ತಡೆಯೊಡ್ಡಬೇಕು ಹಾಗೂ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಂತಹ ಘಟನೆಗಳು ನಡೆದಾಗ ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ ಬಿತ್ತರಿಸುವ ಸುದ್ದಿಗಳಿಗೆ ತಡೆಒಡ್ಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎ.ಡಿ.ಜಿ.ಪಿ ಅಲೋಕ್ ಕುಮಾರ್, ದೊರೆತಿರುವ ಸೂಕ್ತ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗುತ್ತದೆ, ಯಾವುದೇ ಕಾರಣಕ್ಕೂ ತರಾತುರಿ ಮಾಡುವುದಿಲ್ಲ ಎಂದು  ಹೇಳಿದರು. ಅಹಿತಕರ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಫೇಸ್ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮದಲ್ಲಿ ಗಾಳಿ ಸುದ್ದಿ, ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಹಾಗೂ ಹೇಳಿಕೆಗಳನ್ನು ದಾಖಲಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ ಯಾವುದೇ ಕಾರಣಕ್ಕೂ ಜಿಲ್ಲೆಯ ಯುವಕರು ಭಾವದ್ವೇಗಕ್ಕೆ ಒಳಗಾಗಬಾರದು, ಸುಶಿಕ್ಷಿತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪೇಸ್‍ಬುಕ್, ವಾಟ್ಸಪ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ಸುದ್ದಿಗಳನ್ನು ತಿಳಿಯುವ ಮುನ್ನ ಅದರಲ್ಲಿನ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು, ಮುಖ್ಯವಾಗಿ ಹಿರಿಯರು ತಮ್ಮ ಪರಿಸರ ಹಾಗೂ ಸಮುದಾಯದಲ್ಲಿ ಯುವಕರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುವ ಗಾಳಿ ಸುದ್ದಿ ಅಥವಾ ರೂಮರ್ಸ್‍ಗಳಿಗೆ ಕಿವಿಕೊಡದಂತೆ ಈಗಾಗಲೇ ಸಾರ್ವಜನಿಕರಿಗೆ ಕರೆ ನೀಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವನೆ ಮಾತನಾಡಿ, ಮಳೆ ಹಾಗೂ ಗಾಳಿಗೆ ಸಿಸಿಟಿವಿಗಳು ಹಾಳಾಗಿರುವುದರಿಂದ ದುರಸ್ತಿಪಡಿಸಲಾಗುತ್ತಿದೆ, ಕೊಲೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳ ರೀತಿ ತನಿಖೆ ತೀವ್ರವಾಗಿ ನಡೆಯುತ್ತಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago