Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
Advertisement
Advertisement
Advertisement
Advertisement
Advertisement

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Advertisement

 

Advertisement

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

1 hour ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

2 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

3 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

3 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago