Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
Advertisement
Advertisement

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

 

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

57 minutes ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

5 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

6 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

15 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

16 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

16 hours ago