Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

 

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago