Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Advertisement

 

Advertisement

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago