Advertisement
ಸುದ್ದಿಗಳು

53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದ ಫೇಸ್‌ಬುಕ್ …! |

Share

ಸಾಮಾಜಿಕ ಜಾಲತಾಣಗಳ ಬಳಕೆ ಈಚೆಗೆ ಹೆಚ್ಚಾಗಿದೆ. ಅದರಲ್ಲೂ ಪೇಸ್‌ಬುಕ್‌, ಟ್ವಿಟ್ಟರ್‌,ಇನ್‌ಸ್ಟಾಗ್ರಾಂ ಬಳಕೆಯಲ್ಲಿ ಯುವಜನತೆ ಮುಂದಿದ್ದಾರೆ. ಇಂದಿನ ಬಹುತೇಕ ಚರ್ಚೆಗಳೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದು ಬಹಿರಂಗ ಚರ್ಚೆಗೆ ಕಾರಣವಾಗುತ್ತಿದೆ. ಅದರಲ್ಲೂ ದ್ವೇಷ ಭಾಷಣ, ಚರ್ಚೆ, ಅತ್ಯಂತ ಕೆಟ್ಟ ಪದಪ್ರಯೋಗಗಳೂ ಇಲ್ಲೇ ಆಗುತ್ತವೆ. ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಎಪ್ರಿಲ್‌ನಲ್ಲಿ ಫೇಸ್‌ಬುಕ್  53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ ಹಾಗೂ ಕ್ರಮ ಕೈಗೊಂಡಿದೆ.

Advertisement

ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಈಚೆಗೆ  ಫೇಸ್‌ಬುಕ್‌ ಬಳಕೆ ಹೆಚ್ಚಾಗಿದೆ. ಅದರ ಜೊತೆಗೆ ಸುಮಾರು 37.82 ರಷ್ಟು ಫೇಸ್‌ಬುಕ್‌ ನಲ್ಲಿ ಹಾಗೂ ಶೇಕಡಾ 86 ರಷ್ಟು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂಸಾತ್ಮಕ ಮತ್ತು ಪ್ರಚೋದಿಸುವ ವಿಷಯಗಳು ನಡೆದಿದೆ. ಮೇ 31 ರಂದು ಬಿಡುಗಡೆಯಾದ ವರದಿಯ ಪ್ರಕಾರ, ಫೇಸ್‌ಬುಕ್ ಏಪ್ರಿಲ್‌ನಲ್ಲಿ 53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ, ಇದು ಮಾರ್ಚ್‌ನಲ್ಲಿ ಪತ್ತೆಯಾದ 38,600 ಕ್ಕೆ ಹೋಲಿಸಿದರೆ 37.82 ಶೇಕಡಾ ಹೆಚ್ಚಾಗಿದೆ.

ಮಾರ್ಚ್‌ನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ‌ 41,300 ಹಿಂಸಾಚಾರ ಮತ್ತು ಪ್ರಚೋದನೆ-ಸಂಬಂಧಿತ ವಿಷಯ ವರದಿಯಾಗಿತ್ತು.  ಏಪ್ರಿಲ್‌ನಲ್ಲಿ 77,000 ಪ್ರಕರಣ ವರದಿಯಾಗಿದೆ.

ಅದರ ಜೊತೆಗೆ ಆತ್ಮಹತ್ಯೆ ಮತ್ತು ಗಾಯಗಳ ವರದಿಯೂ ಏರಿಕೆ ಕಂಡಿದ್ದು 7.15 ಲಕ್ಷ ಪ್ರಕರಣ ವರದಿಯಾಗಿದೆ.ಅಪಾಯಕಾರಿ ಸಂಘಟನೆ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿ 85 ಸಾವಿರ ಪ್ರಕರಣ ದಾಖಲಾಗಿದೆ. ಅಪಾಯಕಾರಿ ಸಂಘಟನೆ ಹಾಗೂ ಸಂಸ್ಥೆಗಳು, ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿ 1.13 ಲಕ್ಷ ಪ್ರಕರಣವನ್ನು ಪೇಸ್‌ ಬುಕ್‌ ಪತ್ತೆ ಮಾಡಿದೆ. ಇದರ ಜೊತೆಗೆ ಲೈಂಗಿಕ ಪ್ರಕರಣ, ಮಕ್ಕಳಿಗೆ ಕಿರುಕುಳ, ಮಕ್ಕಳ ದುರ್ಬಳಕೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿ ನಡೆದಿದ್ದು  ಅಂತಹ ಘಟನೆಗಳನ್ನು ಪತ್ತೆ ಮಾಡಿದ ಪೇಸ್‌ ಬುಕ್‌ ತಕ್ಷಣವೇ ಕ್ರಮ ಕೈಗೊಂಡಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

46 minutes ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

53 minutes ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

14 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

20 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago