Advertisement
ಸುದ್ದಿಗಳು

53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದ ಫೇಸ್‌ಬುಕ್ …! |

Share

ಸಾಮಾಜಿಕ ಜಾಲತಾಣಗಳ ಬಳಕೆ ಈಚೆಗೆ ಹೆಚ್ಚಾಗಿದೆ. ಅದರಲ್ಲೂ ಪೇಸ್‌ಬುಕ್‌, ಟ್ವಿಟ್ಟರ್‌,ಇನ್‌ಸ್ಟಾಗ್ರಾಂ ಬಳಕೆಯಲ್ಲಿ ಯುವಜನತೆ ಮುಂದಿದ್ದಾರೆ. ಇಂದಿನ ಬಹುತೇಕ ಚರ್ಚೆಗಳೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದು ಬಹಿರಂಗ ಚರ್ಚೆಗೆ ಕಾರಣವಾಗುತ್ತಿದೆ. ಅದರಲ್ಲೂ ದ್ವೇಷ ಭಾಷಣ, ಚರ್ಚೆ, ಅತ್ಯಂತ ಕೆಟ್ಟ ಪದಪ್ರಯೋಗಗಳೂ ಇಲ್ಲೇ ಆಗುತ್ತವೆ. ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಎಪ್ರಿಲ್‌ನಲ್ಲಿ ಫೇಸ್‌ಬುಕ್  53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ ಹಾಗೂ ಕ್ರಮ ಕೈಗೊಂಡಿದೆ.

ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಈಚೆಗೆ  ಫೇಸ್‌ಬುಕ್‌ ಬಳಕೆ ಹೆಚ್ಚಾಗಿದೆ. ಅದರ ಜೊತೆಗೆ ಸುಮಾರು 37.82 ರಷ್ಟು ಫೇಸ್‌ಬುಕ್‌ ನಲ್ಲಿ ಹಾಗೂ ಶೇಕಡಾ 86 ರಷ್ಟು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂಸಾತ್ಮಕ ಮತ್ತು ಪ್ರಚೋದಿಸುವ ವಿಷಯಗಳು ನಡೆದಿದೆ. ಮೇ 31 ರಂದು ಬಿಡುಗಡೆಯಾದ ವರದಿಯ ಪ್ರಕಾರ, ಫೇಸ್‌ಬುಕ್ ಏಪ್ರಿಲ್‌ನಲ್ಲಿ 53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ, ಇದು ಮಾರ್ಚ್‌ನಲ್ಲಿ ಪತ್ತೆಯಾದ 38,600 ಕ್ಕೆ ಹೋಲಿಸಿದರೆ 37.82 ಶೇಕಡಾ ಹೆಚ್ಚಾಗಿದೆ.

ಮಾರ್ಚ್‌ನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ‌ 41,300 ಹಿಂಸಾಚಾರ ಮತ್ತು ಪ್ರಚೋದನೆ-ಸಂಬಂಧಿತ ವಿಷಯ ವರದಿಯಾಗಿತ್ತು.  ಏಪ್ರಿಲ್‌ನಲ್ಲಿ 77,000 ಪ್ರಕರಣ ವರದಿಯಾಗಿದೆ.

ಅದರ ಜೊತೆಗೆ ಆತ್ಮಹತ್ಯೆ ಮತ್ತು ಗಾಯಗಳ ವರದಿಯೂ ಏರಿಕೆ ಕಂಡಿದ್ದು 7.15 ಲಕ್ಷ ಪ್ರಕರಣ ವರದಿಯಾಗಿದೆ.ಅಪಾಯಕಾರಿ ಸಂಘಟನೆ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿ 85 ಸಾವಿರ ಪ್ರಕರಣ ದಾಖಲಾಗಿದೆ. ಅಪಾಯಕಾರಿ ಸಂಘಟನೆ ಹಾಗೂ ಸಂಸ್ಥೆಗಳು, ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿ 1.13 ಲಕ್ಷ ಪ್ರಕರಣವನ್ನು ಪೇಸ್‌ ಬುಕ್‌ ಪತ್ತೆ ಮಾಡಿದೆ. ಇದರ ಜೊತೆಗೆ ಲೈಂಗಿಕ ಪ್ರಕರಣ, ಮಕ್ಕಳಿಗೆ ಕಿರುಕುಳ, ಮಕ್ಕಳ ದುರ್ಬಳಕೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿ ನಡೆದಿದ್ದು  ಅಂತಹ ಘಟನೆಗಳನ್ನು ಪತ್ತೆ ಮಾಡಿದ ಪೇಸ್‌ ಬುಕ್‌ ತಕ್ಷಣವೇ ಕ್ರಮ ಕೈಗೊಂಡಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

19 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

20 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago