Advertisement
ಸುದ್ದಿಗಳು

53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದ ಫೇಸ್‌ಬುಕ್ …! |

Share

ಸಾಮಾಜಿಕ ಜಾಲತಾಣಗಳ ಬಳಕೆ ಈಚೆಗೆ ಹೆಚ್ಚಾಗಿದೆ. ಅದರಲ್ಲೂ ಪೇಸ್‌ಬುಕ್‌, ಟ್ವಿಟ್ಟರ್‌,ಇನ್‌ಸ್ಟಾಗ್ರಾಂ ಬಳಕೆಯಲ್ಲಿ ಯುವಜನತೆ ಮುಂದಿದ್ದಾರೆ. ಇಂದಿನ ಬಹುತೇಕ ಚರ್ಚೆಗಳೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದು ಬಹಿರಂಗ ಚರ್ಚೆಗೆ ಕಾರಣವಾಗುತ್ತಿದೆ. ಅದರಲ್ಲೂ ದ್ವೇಷ ಭಾಷಣ, ಚರ್ಚೆ, ಅತ್ಯಂತ ಕೆಟ್ಟ ಪದಪ್ರಯೋಗಗಳೂ ಇಲ್ಲೇ ಆಗುತ್ತವೆ. ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಎಪ್ರಿಲ್‌ನಲ್ಲಿ ಫೇಸ್‌ಬುಕ್  53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ ಹಾಗೂ ಕ್ರಮ ಕೈಗೊಂಡಿದೆ.

ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಈಚೆಗೆ  ಫೇಸ್‌ಬುಕ್‌ ಬಳಕೆ ಹೆಚ್ಚಾಗಿದೆ. ಅದರ ಜೊತೆಗೆ ಸುಮಾರು 37.82 ರಷ್ಟು ಫೇಸ್‌ಬುಕ್‌ ನಲ್ಲಿ ಹಾಗೂ ಶೇಕಡಾ 86 ರಷ್ಟು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂಸಾತ್ಮಕ ಮತ್ತು ಪ್ರಚೋದಿಸುವ ವಿಷಯಗಳು ನಡೆದಿದೆ. ಮೇ 31 ರಂದು ಬಿಡುಗಡೆಯಾದ ವರದಿಯ ಪ್ರಕಾರ, ಫೇಸ್‌ಬುಕ್ ಏಪ್ರಿಲ್‌ನಲ್ಲಿ 53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ, ಇದು ಮಾರ್ಚ್‌ನಲ್ಲಿ ಪತ್ತೆಯಾದ 38,600 ಕ್ಕೆ ಹೋಲಿಸಿದರೆ 37.82 ಶೇಕಡಾ ಹೆಚ್ಚಾಗಿದೆ.

ಮಾರ್ಚ್‌ನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ‌ 41,300 ಹಿಂಸಾಚಾರ ಮತ್ತು ಪ್ರಚೋದನೆ-ಸಂಬಂಧಿತ ವಿಷಯ ವರದಿಯಾಗಿತ್ತು.  ಏಪ್ರಿಲ್‌ನಲ್ಲಿ 77,000 ಪ್ರಕರಣ ವರದಿಯಾಗಿದೆ.

ಅದರ ಜೊತೆಗೆ ಆತ್ಮಹತ್ಯೆ ಮತ್ತು ಗಾಯಗಳ ವರದಿಯೂ ಏರಿಕೆ ಕಂಡಿದ್ದು 7.15 ಲಕ್ಷ ಪ್ರಕರಣ ವರದಿಯಾಗಿದೆ.ಅಪಾಯಕಾರಿ ಸಂಘಟನೆ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿ 85 ಸಾವಿರ ಪ್ರಕರಣ ದಾಖಲಾಗಿದೆ. ಅಪಾಯಕಾರಿ ಸಂಘಟನೆ ಹಾಗೂ ಸಂಸ್ಥೆಗಳು, ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿ 1.13 ಲಕ್ಷ ಪ್ರಕರಣವನ್ನು ಪೇಸ್‌ ಬುಕ್‌ ಪತ್ತೆ ಮಾಡಿದೆ. ಇದರ ಜೊತೆಗೆ ಲೈಂಗಿಕ ಪ್ರಕರಣ, ಮಕ್ಕಳಿಗೆ ಕಿರುಕುಳ, ಮಕ್ಕಳ ದುರ್ಬಳಕೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿ ನಡೆದಿದ್ದು  ಅಂತಹ ಘಟನೆಗಳನ್ನು ಪತ್ತೆ ಮಾಡಿದ ಪೇಸ್‌ ಬುಕ್‌ ತಕ್ಷಣವೇ ಕ್ರಮ ಕೈಗೊಂಡಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

6 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

7 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

9 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

21 hours ago