Advertisement
ಸುದ್ದಿಗಳು

53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದ ಫೇಸ್‌ಬುಕ್ …! |

Share

ಸಾಮಾಜಿಕ ಜಾಲತಾಣಗಳ ಬಳಕೆ ಈಚೆಗೆ ಹೆಚ್ಚಾಗಿದೆ. ಅದರಲ್ಲೂ ಪೇಸ್‌ಬುಕ್‌, ಟ್ವಿಟ್ಟರ್‌,ಇನ್‌ಸ್ಟಾಗ್ರಾಂ ಬಳಕೆಯಲ್ಲಿ ಯುವಜನತೆ ಮುಂದಿದ್ದಾರೆ. ಇಂದಿನ ಬಹುತೇಕ ಚರ್ಚೆಗಳೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದು ಬಹಿರಂಗ ಚರ್ಚೆಗೆ ಕಾರಣವಾಗುತ್ತಿದೆ. ಅದರಲ್ಲೂ ದ್ವೇಷ ಭಾಷಣ, ಚರ್ಚೆ, ಅತ್ಯಂತ ಕೆಟ್ಟ ಪದಪ್ರಯೋಗಗಳೂ ಇಲ್ಲೇ ಆಗುತ್ತವೆ. ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಎಪ್ರಿಲ್‌ನಲ್ಲಿ ಫೇಸ್‌ಬುಕ್  53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ ಹಾಗೂ ಕ್ರಮ ಕೈಗೊಂಡಿದೆ.

ಮೆಟಾ ಬಿಡುಗಡೆ ಮಾಡಿರುವ ವರದಿ ಪ್ರಕಾರ ಈಚೆಗೆ  ಫೇಸ್‌ಬುಕ್‌ ಬಳಕೆ ಹೆಚ್ಚಾಗಿದೆ. ಅದರ ಜೊತೆಗೆ ಸುಮಾರು 37.82 ರಷ್ಟು ಫೇಸ್‌ಬುಕ್‌ ನಲ್ಲಿ ಹಾಗೂ ಶೇಕಡಾ 86 ರಷ್ಟು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂಸಾತ್ಮಕ ಮತ್ತು ಪ್ರಚೋದಿಸುವ ವಿಷಯಗಳು ನಡೆದಿದೆ. ಮೇ 31 ರಂದು ಬಿಡುಗಡೆಯಾದ ವರದಿಯ ಪ್ರಕಾರ, ಫೇಸ್‌ಬುಕ್ ಏಪ್ರಿಲ್‌ನಲ್ಲಿ 53,200 ದ್ವೇಷ ಭಾಷಣಗಳನ್ನು ಪತ್ತೆಹಚ್ಚಿದೆ, ಇದು ಮಾರ್ಚ್‌ನಲ್ಲಿ ಪತ್ತೆಯಾದ 38,600 ಕ್ಕೆ ಹೋಲಿಸಿದರೆ 37.82 ಶೇಕಡಾ ಹೆಚ್ಚಾಗಿದೆ.

ಮಾರ್ಚ್‌ನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ‌ 41,300 ಹಿಂಸಾಚಾರ ಮತ್ತು ಪ್ರಚೋದನೆ-ಸಂಬಂಧಿತ ವಿಷಯ ವರದಿಯಾಗಿತ್ತು.  ಏಪ್ರಿಲ್‌ನಲ್ಲಿ 77,000 ಪ್ರಕರಣ ವರದಿಯಾಗಿದೆ.

ಅದರ ಜೊತೆಗೆ ಆತ್ಮಹತ್ಯೆ ಮತ್ತು ಗಾಯಗಳ ವರದಿಯೂ ಏರಿಕೆ ಕಂಡಿದ್ದು 7.15 ಲಕ್ಷ ಪ್ರಕರಣ ವರದಿಯಾಗಿದೆ.ಅಪಾಯಕಾರಿ ಸಂಘಟನೆ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿ 85 ಸಾವಿರ ಪ್ರಕರಣ ದಾಖಲಾಗಿದೆ. ಅಪಾಯಕಾರಿ ಸಂಘಟನೆ ಹಾಗೂ ಸಂಸ್ಥೆಗಳು, ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿ 1.13 ಲಕ್ಷ ಪ್ರಕರಣವನ್ನು ಪೇಸ್‌ ಬುಕ್‌ ಪತ್ತೆ ಮಾಡಿದೆ. ಇದರ ಜೊತೆಗೆ ಲೈಂಗಿಕ ಪ್ರಕರಣ, ಮಕ್ಕಳಿಗೆ ಕಿರುಕುಳ, ಮಕ್ಕಳ ದುರ್ಬಳಕೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿ ನಡೆದಿದ್ದು  ಅಂತಹ ಘಟನೆಗಳನ್ನು ಪತ್ತೆ ಮಾಡಿದ ಪೇಸ್‌ ಬುಕ್‌ ತಕ್ಷಣವೇ ಕ್ರಮ ಕೈಗೊಂಡಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

26 minutes ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

54 minutes ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

10 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

12 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

19 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago