ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಕಳೆದ ಮೂರು ದಶಕಗಳಿಂದ ಕೊಡಗು ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ರಾಜ್ಯ ಸಕಾ೯ರ ಮುಂದಾಗಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶ ಸೇರಿದಂತೆ . ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಯಾವೆಲ್ಲ ವಿಭಾಗಗಳಲ್ಲಿ ಕಂದಕಗಳು ಮತ್ತು ರೈಲ್ವೆ ಹಳಿಯ ಬೇಲಿಗಳಿವೆಯೋ, ಅಲ್ಲಿ ಹಾಳಾದ ಭಾಗಗಳನ್ನು ಗುರುತಿಸಿ ದುರಸ್ತಿ ಪಡಿಸುವ ಕೆಲಸ ಕಾರ್ಯಗಳಿಗೆ ಸರ್ಕಾರ 21 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಕಾಡಾನೆಗಳ ಗಂಭೀರ ಆತಂಕವನ್ನು ಎದುರಿಸುತ್ತಿರುವ ಪಂಚಾಯ್ತಿ ವ್ಯಾಪ್ತಿಯ ಕಂದಕಗಳ ದುರಸ್ತಿ, ರೈಲ್ವೆ ಹಳಿ ಬೇಲಿಗಳ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ…