Advertisement
MIRROR FOCUS

ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

Share

ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು  ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

ಕಳೆದ ಮೂರು ದಶಕಗಳಿಂದ ಕೊಡಗು ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ರಾಜ್ಯ ಸಕಾ೯ರ ಮುಂದಾಗಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶ ಸೇರಿದಂತೆ .  ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.   ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಯಾವೆಲ್ಲ ವಿಭಾಗಗಳಲ್ಲಿ ಕಂದಕಗಳು ಮತ್ತು ರೈಲ್ವೆ ಹಳಿಯ ಬೇಲಿಗಳಿವೆಯೋ, ಅಲ್ಲಿ ಹಾಳಾದ ಭಾಗಗಳನ್ನು ಗುರುತಿಸಿ ದುರಸ್ತಿ ಪಡಿಸುವ ಕೆಲಸ ಕಾರ್ಯಗಳಿಗೆ ಸರ್ಕಾರ  21 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಕಾಡಾನೆಗಳ ಗಂಭೀರ ಆತಂಕವನ್ನು ಎದುರಿಸುತ್ತಿರುವ ಪಂಚಾಯ್ತಿ ವ್ಯಾಪ್ತಿಯ ಕಂದಕಗಳ ದುರಸ್ತಿ, ರೈಲ್ವೆ ಹಳಿ ಬೇಲಿಗಳ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

4 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

10 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

10 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

21 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

22 hours ago