Advertisement
ಕೃಷಿ

ಎಲ್ಲವೂ ಬದಲಾಗುತ್ತಿದೆ – ಮಣ್ಣು ನಿಸ್ಸಾರವಾಗುತ್ತಿದೆ | ಹೈಬ್ರಿಡ್ ಬೀಜಗಳು ಮೇಳೈಸಿವೆ…! |

Share

ಬದಲಾವಣೆ ಜಗದ ನಿಯಮ.. ಹಾಗಂತ ಎಲ್ಲವೂ ಬದಲಾದರೆ..? ಇಡೀ ಜಗತ್ತೇ ಬದಲಾಗುತ್ತದೆ. ದಿನಿತ್ಯದ ಚಟುವಟಿಕೆಯಲ್ಲೂ ಬದಲಾವಣೆ ಕಾಣುತ್ತದೆ. ಆದರೆ ಅದು ಎಷ್ಟು ಸೂಕ್ತ. ಈ ಬದಲಾವಣೆಯಿಂದ ಪರಿಸರದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ. ಅದನ್ನು ಪರಿಸರರಕ್ಕೆ ತಡೆದುಕೊಳ್ಳುವ ಶಕ್ತಿ ಇದೆಯೇ..? ಅದರಿಂದ ನಮ್ಮ ಮೇಲೆ ಯಾವ ರೀತಿಯಾದ ಪರಿಣಾಮ ಬೀರಬಹುದು.. ? ಈ ಎಲ್ಲಾ ಬದಲಾವಣೆಗಳ ಬಗ್ಗೆ ಸಂಜಯ್ ಹೊಯ್ಸಳ ಅವರು ಬರೆದ ಲೇಖನ ಇಂದಿಗೆ ಖಂಡಿತ ಪ್ರಸ್ತುತ ಎಂದೇ ಹೇಳಬಹುದು.

Advertisement
Advertisement
Advertisement
Advertisement
Advertisement

ಭೂಮಿ ಮೇಲೆ ಮಾನವ ಎಂಬ ಒಂದೇ ಒಂದು ಜೀವಿಯ ಸಂಖ್ಯೆ ಬಿಲಿಯನ್ ಲೆಕ್ಕದಲ್ಲಿ ಏರಿದಂತೆ ಉಳಿದ ಅಸಂಖ್ಯಾತ ಜೀವಿಗಳು ಒಂದೊಂದೆ ಶಾಶ್ವತವಾಗಿ ಕಣ್ಮರೆಯಾಗುತ್ತಿವೆ. ಹಿಂದೆ ಕೃಷಿ ಭೂಮಿಯಲ್ಲೂ ಎಲ್ಲೆಲ್ಲೂ‌ ಕಾಣುತ್ತಿದ್ದ ನರಿ, ಮೊಲ, ಕಾಡು ಬೆಕ್ಕು, ಕಬ್ಬೆಕ್ಕು, ಕಬ್ರುಜೋಳ (ಸಹಸ್ರಪದಿ), ಸಾವಿರ ಸಾವಿರ ಸಂಖ್ಯೆಯ ಸರೀಸೃಪಗಳು, ಲಕ್ಷೋಪಾದಿಯ ವೈವಿಧ್ಯಮಯ ಹಕ್ಕಿಗಳು…  ‘ತುಂಬಿದ ಕೊಡ’ದಂತ ಕೃಷಿ ಭೂಮಿಯಲ್ಲಿ ಸಂತೃಪ್ತವಾಗಿದ್ದವು. ಇಂದು ಗಿಡ ಮರಗಳಿಲ್ಲದೆ ಬರಿದಾದ ಉದ್ದುದ್ದದ ‘ಖಾಲಿ ಕೊಡ’ದಂತ ಕೃಷಿ ಭೂಮಿಯಲ್ಲಿ ಮಣ್ಣು ಬಿಟ್ಟರೇ ಬೇರೇನೂ ಇಲ್ಲದಾಗಿದೆ! ಆ ಮಣ್ಣು ಕೂಡ ದಿನೇ ದಿನೆ ನಿಸ್ಸಾರವಾಗುತ್ತಿದೆ!!

Advertisement

ವ್ಯವಸಾಯದ ಪ್ರತಿ ಹಂತದಲ್ಲೂ ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸಿಕೊಂಡು ನಡೆಯುತ್ತಿದ್ದ ಸಾಂಪ್ರದಾಯಿಕ ಕೃಷಿ ಪದ್ದತಿಯ ಜಾಗವನ್ನು ಯಾಂತ್ರಿಕ ಕೃಷಿ ಆವರಿಸಿಕೊಂಡ ನಂತರ ತಿಪ್ಪೆ ಗೊಬ್ಬರ, ಕೃಷಿ ಭೂಮಿಯಲ್ಲಿ ಬೆಳೆಯುತ್ತಿದ್ದ ತರೇವರಿ ಗಿಡಮರಗಳು, ವೈವಿಧ್ಯಮಯ ಬೆಳೆಗಳು, ಉದ್ಯಮ ಸ್ವರೂಪ ಕಾಣದ ಕೃಷಿಯೊಂದಿಗೆ ಬೆರತುಹೋಗಿದ್ದ ಹೈನುಗಾರಿಕೆ… ಎಲ್ಲವೂ ಬದಲಾಗಿ  ಪ್ರತಿಹಂತದಲ್ಲೂ ರಾಸಾಯನಿಕ ಕೃಷಿ, ಏಕಬೆಳೆ ಕೃಷಿ, ಮೂಲ ತಳಿಯ ತರೇವಾರಿ ಬೀಜ ತಳಿಗಳ‌ ಜಾಗದಲ್ಲಿ ಏಕರೀತಿಯ ಹೈಬ್ರೀಡ್ ಬೀಜಗಳು ಮೇಳೈಸಿದವು.

ಎಲ್ಲಾ ಕ್ಷೇತ್ರದಲ್ಲಿಯೂ ಲಾಭವೇ ಮುಖ್ಯವಾಗಿರುವಾಗ, ಆರ್ಥಿಕತೆಯೇ ಬದುಕೆಂಬ ‘ಕತೆ’ಯ ಜೀವಾಳವಾಗಿರುವಾಗ ಇವೆಲ್ಲವೂ ಅನಿವಾರ್ಯ ಎನ್ನುವಂತಾಗಿರುವುದು ಮಾತ್ರ ಸತ್ಯ! ಉಳಿದವರು ಎಲ್ಲವನ್ನು ಉಡಾಯಿಸಿ ಅಕ್ರಮ, ಭ್ರಷ್ಟತೆಯ ಮೂಲಕ ಐಶಾರಾಮಿ ಜೀವನ ನಡೆಸುವಾಗ, ರೈತರು ಮಾತ್ರ ‘ಪರಿಶುದ್ಧ’ ವಾಗಿರಬೇಕೆಂಬುದು ಎಷ್ಟು ನ್ಯಾಯ!? ಹಾಗಾಗಿ ಈ ವಿಷಯದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆಯಾಗಬೇಕಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

9 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

15 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

16 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

18 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago