ಬದಲಾವಣೆ ಜಗದ ನಿಯಮ.. ಹಾಗಂತ ಎಲ್ಲವೂ ಬದಲಾದರೆ..? ಇಡೀ ಜಗತ್ತೇ ಬದಲಾಗುತ್ತದೆ. ದಿನಿತ್ಯದ ಚಟುವಟಿಕೆಯಲ್ಲೂ ಬದಲಾವಣೆ ಕಾಣುತ್ತದೆ. ಆದರೆ ಅದು ಎಷ್ಟು ಸೂಕ್ತ. ಈ ಬದಲಾವಣೆಯಿಂದ ಪರಿಸರದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ. ಅದನ್ನು ಪರಿಸರರಕ್ಕೆ ತಡೆದುಕೊಳ್ಳುವ ಶಕ್ತಿ ಇದೆಯೇ..? ಅದರಿಂದ ನಮ್ಮ ಮೇಲೆ ಯಾವ ರೀತಿಯಾದ ಪರಿಣಾಮ ಬೀರಬಹುದು.. ? ಈ ಎಲ್ಲಾ ಬದಲಾವಣೆಗಳ ಬಗ್ಗೆ ಸಂಜಯ್ ಹೊಯ್ಸಳ ಅವರು ಬರೆದ ಲೇಖನ ಇಂದಿಗೆ ಖಂಡಿತ ಪ್ರಸ್ತುತ ಎಂದೇ ಹೇಳಬಹುದು.
ಭೂಮಿ ಮೇಲೆ ಮಾನವ ಎಂಬ ಒಂದೇ ಒಂದು ಜೀವಿಯ ಸಂಖ್ಯೆ ಬಿಲಿಯನ್ ಲೆಕ್ಕದಲ್ಲಿ ಏರಿದಂತೆ ಉಳಿದ ಅಸಂಖ್ಯಾತ ಜೀವಿಗಳು ಒಂದೊಂದೆ ಶಾಶ್ವತವಾಗಿ ಕಣ್ಮರೆಯಾಗುತ್ತಿವೆ. ಹಿಂದೆ ಕೃಷಿ ಭೂಮಿಯಲ್ಲೂ ಎಲ್ಲೆಲ್ಲೂ ಕಾಣುತ್ತಿದ್ದ ನರಿ, ಮೊಲ, ಕಾಡು ಬೆಕ್ಕು, ಕಬ್ಬೆಕ್ಕು, ಕಬ್ರುಜೋಳ (ಸಹಸ್ರಪದಿ), ಸಾವಿರ ಸಾವಿರ ಸಂಖ್ಯೆಯ ಸರೀಸೃಪಗಳು, ಲಕ್ಷೋಪಾದಿಯ ವೈವಿಧ್ಯಮಯ ಹಕ್ಕಿಗಳು… ‘ತುಂಬಿದ ಕೊಡ’ದಂತ ಕೃಷಿ ಭೂಮಿಯಲ್ಲಿ ಸಂತೃಪ್ತವಾಗಿದ್ದವು. ಇಂದು ಗಿಡ ಮರಗಳಿಲ್ಲದೆ ಬರಿದಾದ ಉದ್ದುದ್ದದ ‘ಖಾಲಿ ಕೊಡ’ದಂತ ಕೃಷಿ ಭೂಮಿಯಲ್ಲಿ ಮಣ್ಣು ಬಿಟ್ಟರೇ ಬೇರೇನೂ ಇಲ್ಲದಾಗಿದೆ! ಆ ಮಣ್ಣು ಕೂಡ ದಿನೇ ದಿನೆ ನಿಸ್ಸಾರವಾಗುತ್ತಿದೆ!!
ವ್ಯವಸಾಯದ ಪ್ರತಿ ಹಂತದಲ್ಲೂ ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸಿಕೊಂಡು ನಡೆಯುತ್ತಿದ್ದ ಸಾಂಪ್ರದಾಯಿಕ ಕೃಷಿ ಪದ್ದತಿಯ ಜಾಗವನ್ನು ಯಾಂತ್ರಿಕ ಕೃಷಿ ಆವರಿಸಿಕೊಂಡ ನಂತರ ತಿಪ್ಪೆ ಗೊಬ್ಬರ, ಕೃಷಿ ಭೂಮಿಯಲ್ಲಿ ಬೆಳೆಯುತ್ತಿದ್ದ ತರೇವರಿ ಗಿಡಮರಗಳು, ವೈವಿಧ್ಯಮಯ ಬೆಳೆಗಳು, ಉದ್ಯಮ ಸ್ವರೂಪ ಕಾಣದ ಕೃಷಿಯೊಂದಿಗೆ ಬೆರತುಹೋಗಿದ್ದ ಹೈನುಗಾರಿಕೆ… ಎಲ್ಲವೂ ಬದಲಾಗಿ ಪ್ರತಿಹಂತದಲ್ಲೂ ರಾಸಾಯನಿಕ ಕೃಷಿ, ಏಕಬೆಳೆ ಕೃಷಿ, ಮೂಲ ತಳಿಯ ತರೇವಾರಿ ಬೀಜ ತಳಿಗಳ ಜಾಗದಲ್ಲಿ ಏಕರೀತಿಯ ಹೈಬ್ರೀಡ್ ಬೀಜಗಳು ಮೇಳೈಸಿದವು.
ಎಲ್ಲಾ ಕ್ಷೇತ್ರದಲ್ಲಿಯೂ ಲಾಭವೇ ಮುಖ್ಯವಾಗಿರುವಾಗ, ಆರ್ಥಿಕತೆಯೇ ಬದುಕೆಂಬ ‘ಕತೆ’ಯ ಜೀವಾಳವಾಗಿರುವಾಗ ಇವೆಲ್ಲವೂ ಅನಿವಾರ್ಯ ಎನ್ನುವಂತಾಗಿರುವುದು ಮಾತ್ರ ಸತ್ಯ! ಉಳಿದವರು ಎಲ್ಲವನ್ನು ಉಡಾಯಿಸಿ ಅಕ್ರಮ, ಭ್ರಷ್ಟತೆಯ ಮೂಲಕ ಐಶಾರಾಮಿ ಜೀವನ ನಡೆಸುವಾಗ, ರೈತರು ಮಾತ್ರ ‘ಪರಿಶುದ್ಧ’ ವಾಗಿರಬೇಕೆಂಬುದು ಎಷ್ಟು ನ್ಯಾಯ!? ಹಾಗಾಗಿ ಈ ವಿಷಯದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆಯಾಗಬೇಕಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…