Advertisement
ಕೃಷಿ

ಎಲ್ಲವೂ ಬದಲಾಗುತ್ತಿದೆ – ಮಣ್ಣು ನಿಸ್ಸಾರವಾಗುತ್ತಿದೆ | ಹೈಬ್ರಿಡ್ ಬೀಜಗಳು ಮೇಳೈಸಿವೆ…! |

Share

ಬದಲಾವಣೆ ಜಗದ ನಿಯಮ.. ಹಾಗಂತ ಎಲ್ಲವೂ ಬದಲಾದರೆ..? ಇಡೀ ಜಗತ್ತೇ ಬದಲಾಗುತ್ತದೆ. ದಿನಿತ್ಯದ ಚಟುವಟಿಕೆಯಲ್ಲೂ ಬದಲಾವಣೆ ಕಾಣುತ್ತದೆ. ಆದರೆ ಅದು ಎಷ್ಟು ಸೂಕ್ತ. ಈ ಬದಲಾವಣೆಯಿಂದ ಪರಿಸರದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ. ಅದನ್ನು ಪರಿಸರರಕ್ಕೆ ತಡೆದುಕೊಳ್ಳುವ ಶಕ್ತಿ ಇದೆಯೇ..? ಅದರಿಂದ ನಮ್ಮ ಮೇಲೆ ಯಾವ ರೀತಿಯಾದ ಪರಿಣಾಮ ಬೀರಬಹುದು.. ? ಈ ಎಲ್ಲಾ ಬದಲಾವಣೆಗಳ ಬಗ್ಗೆ ಸಂಜಯ್ ಹೊಯ್ಸಳ ಅವರು ಬರೆದ ಲೇಖನ ಇಂದಿಗೆ ಖಂಡಿತ ಪ್ರಸ್ತುತ ಎಂದೇ ಹೇಳಬಹುದು.

ಭೂಮಿ ಮೇಲೆ ಮಾನವ ಎಂಬ ಒಂದೇ ಒಂದು ಜೀವಿಯ ಸಂಖ್ಯೆ ಬಿಲಿಯನ್ ಲೆಕ್ಕದಲ್ಲಿ ಏರಿದಂತೆ ಉಳಿದ ಅಸಂಖ್ಯಾತ ಜೀವಿಗಳು ಒಂದೊಂದೆ ಶಾಶ್ವತವಾಗಿ ಕಣ್ಮರೆಯಾಗುತ್ತಿವೆ. ಹಿಂದೆ ಕೃಷಿ ಭೂಮಿಯಲ್ಲೂ ಎಲ್ಲೆಲ್ಲೂ‌ ಕಾಣುತ್ತಿದ್ದ ನರಿ, ಮೊಲ, ಕಾಡು ಬೆಕ್ಕು, ಕಬ್ಬೆಕ್ಕು, ಕಬ್ರುಜೋಳ (ಸಹಸ್ರಪದಿ), ಸಾವಿರ ಸಾವಿರ ಸಂಖ್ಯೆಯ ಸರೀಸೃಪಗಳು, ಲಕ್ಷೋಪಾದಿಯ ವೈವಿಧ್ಯಮಯ ಹಕ್ಕಿಗಳು…  ‘ತುಂಬಿದ ಕೊಡ’ದಂತ ಕೃಷಿ ಭೂಮಿಯಲ್ಲಿ ಸಂತೃಪ್ತವಾಗಿದ್ದವು. ಇಂದು ಗಿಡ ಮರಗಳಿಲ್ಲದೆ ಬರಿದಾದ ಉದ್ದುದ್ದದ ‘ಖಾಲಿ ಕೊಡ’ದಂತ ಕೃಷಿ ಭೂಮಿಯಲ್ಲಿ ಮಣ್ಣು ಬಿಟ್ಟರೇ ಬೇರೇನೂ ಇಲ್ಲದಾಗಿದೆ! ಆ ಮಣ್ಣು ಕೂಡ ದಿನೇ ದಿನೆ ನಿಸ್ಸಾರವಾಗುತ್ತಿದೆ!!

ವ್ಯವಸಾಯದ ಪ್ರತಿ ಹಂತದಲ್ಲೂ ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸಿಕೊಂಡು ನಡೆಯುತ್ತಿದ್ದ ಸಾಂಪ್ರದಾಯಿಕ ಕೃಷಿ ಪದ್ದತಿಯ ಜಾಗವನ್ನು ಯಾಂತ್ರಿಕ ಕೃಷಿ ಆವರಿಸಿಕೊಂಡ ನಂತರ ತಿಪ್ಪೆ ಗೊಬ್ಬರ, ಕೃಷಿ ಭೂಮಿಯಲ್ಲಿ ಬೆಳೆಯುತ್ತಿದ್ದ ತರೇವರಿ ಗಿಡಮರಗಳು, ವೈವಿಧ್ಯಮಯ ಬೆಳೆಗಳು, ಉದ್ಯಮ ಸ್ವರೂಪ ಕಾಣದ ಕೃಷಿಯೊಂದಿಗೆ ಬೆರತುಹೋಗಿದ್ದ ಹೈನುಗಾರಿಕೆ… ಎಲ್ಲವೂ ಬದಲಾಗಿ  ಪ್ರತಿಹಂತದಲ್ಲೂ ರಾಸಾಯನಿಕ ಕೃಷಿ, ಏಕಬೆಳೆ ಕೃಷಿ, ಮೂಲ ತಳಿಯ ತರೇವಾರಿ ಬೀಜ ತಳಿಗಳ‌ ಜಾಗದಲ್ಲಿ ಏಕರೀತಿಯ ಹೈಬ್ರೀಡ್ ಬೀಜಗಳು ಮೇಳೈಸಿದವು.

ಎಲ್ಲಾ ಕ್ಷೇತ್ರದಲ್ಲಿಯೂ ಲಾಭವೇ ಮುಖ್ಯವಾಗಿರುವಾಗ, ಆರ್ಥಿಕತೆಯೇ ಬದುಕೆಂಬ ‘ಕತೆ’ಯ ಜೀವಾಳವಾಗಿರುವಾಗ ಇವೆಲ್ಲವೂ ಅನಿವಾರ್ಯ ಎನ್ನುವಂತಾಗಿರುವುದು ಮಾತ್ರ ಸತ್ಯ! ಉಳಿದವರು ಎಲ್ಲವನ್ನು ಉಡಾಯಿಸಿ ಅಕ್ರಮ, ಭ್ರಷ್ಟತೆಯ ಮೂಲಕ ಐಶಾರಾಮಿ ಜೀವನ ನಡೆಸುವಾಗ, ರೈತರು ಮಾತ್ರ ‘ಪರಿಶುದ್ಧ’ ವಾಗಿರಬೇಕೆಂಬುದು ಎಷ್ಟು ನ್ಯಾಯ!? ಹಾಗಾಗಿ ಈ ವಿಷಯದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆಯಾಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

20 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago