ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನಿನ ಮಣ್ಣನ್ನು ಸಾಗಾಟ ಮಾಡುತ್ತಿರುವ ರೈತರಿಗೆ ಅನಗತ್ಯ ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೃಷಿ ಉದ್ದೇಶದ ಮಣ್ಣು ಸಾಗಾಣಿಕೆ ವೇಳೆ ಎದುರಾಗುತ್ತಿರುವ ಅಡೆತಡೆಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ರೈತರು ತಮ್ಮ ಸ್ವಂತ ಜಮೀನಿನ ಮಣ್ಣನ್ನು ಕೃಷಿ ಉದ್ದೇಶಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸಿ ಬಳಸುತ್ತಿದ್ದಾರೆ. ಇದು ಯಾವುದೇ ವಾಣಿಜ್ಯ ಅಥವಾ ಅನ್ಯ ಉದ್ದೇಶಕ್ಕಾಗಿ ನಡೆಯುವ ಮಣ್ಣು ಸಾಗಾಟವಲ್ಲ ಎಂಬುದನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಮಣ್ಣು ಸಾಗಾಟದ ವೇಳೆ ನಿಯಮಾನುಸಾರ ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದರು ಸ್ಪಷ್ಟ ನಿರ್ದೇಶನ ನೀಡಿದರು. ರೈತರ ಕೃಷಿ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯ ಕ್ರಮಗಳನ್ನು ತಪ್ಪಿಸಲು ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಅವರು ಸೂಚಿಸಿದರು.
Udupi-Chikkamagaluru MP Kota Srinivas Poojary instructed officials not to harass farmers transporting soil within their own land for agricultural purposes. He emphasized that such activities are part of normal farming practices and officials must ensure farmers do not face unnecessary obstacles.
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…
ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ…