Advertisement
MIRROR FOCUS

ಕೃಷಿ ಮಣ್ಣು ಸಾಗಾಟಕ್ಕೆ ತೊಂದರೆ ಕೊಡಬೇಡಿ ; ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

Share

ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನಿನ ಮಣ್ಣನ್ನು ಸಾಗಾಟ ಮಾಡುತ್ತಿರುವ ರೈತರಿಗೆ ಅನಗತ್ಯ ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೃಷಿ ಉದ್ದೇಶದ ಮಣ್ಣು ಸಾಗಾಣಿಕೆ ವೇಳೆ ಎದುರಾಗುತ್ತಿರುವ ಅಡೆತಡೆಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ರೈತರು ತಮ್ಮ ಸ್ವಂತ ಜಮೀನಿನ ಮಣ್ಣನ್ನು ಕೃಷಿ ಉದ್ದೇಶಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸಿ ಬಳಸುತ್ತಿದ್ದಾರೆ. ಇದು ಯಾವುದೇ ವಾಣಿಜ್ಯ ಅಥವಾ ಅನ್ಯ ಉದ್ದೇಶಕ್ಕಾಗಿ ನಡೆಯುವ ಮಣ್ಣು ಸಾಗಾಟವಲ್ಲ ಎಂಬುದನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಮಣ್ಣು ಸಾಗಾಟದ ವೇಳೆ ನಿಯಮಾನುಸಾರ ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದರು ಸ್ಪಷ್ಟ ನಿರ್ದೇಶನ ನೀಡಿದರು. ರೈತರ ಕೃಷಿ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯ ಕ್ರಮಗಳನ್ನು ತಪ್ಪಿಸಲು ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಅವರು ಸೂಚಿಸಿದರು.

Udupi-Chikkamagaluru MP Kota Srinivas Poojary instructed officials not to harass farmers transporting soil within their own land for agricultural purposes. He emphasized that such activities are part of normal farming practices and officials must ensure farmers do not face unnecessary obstacles.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

6 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

7 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

20 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago