Advertisement
MIRROR FOCUS

1 ಕೋಟಿ ಮನೆಗಳಿಗೆ ಸೋಲಾರ್, 300 ಯೂನಿಟ್ ವಿದ್ಯುತ್ ಫ್ರೀ ಹೇಗೆ..? | ಉಚಿತ ಕಾನ್ಸೆಪ್ಟ್‌ ಬದಲಾಯಿಸಿದ್ದು ಹೇಗೆ ? |

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Minister Nirmala Sitharaman) ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಆರಂಭದಲ್ಲಿ ಸರ್ಕಾರದ (Modi Government) ಅಭಿವೃದ್ಧಿ ಕೆಲಸಗಳ ಮಾಹಿತಿಯನ್ನು ನೀಡಿದರು. ಗ್ರಾಮೀಣ(Rural) ಭಾಗದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ. ಅದರಲ್ಲಿ 1 ಕೋಟಿ ಮನೆಗಳ ಮೇಲೆ ಸೌರ ವಿದ್ಯುತ್ ಅಳವಡಿಕೆ ಮಾಡಲಾಗುತ್ತದೆ. ಉಚಿತ ಸೋಲಾರ್ ವಿದ್ಯುತ್ ಘೋಷಿಸಲಾಗಿದೆ. ಮಧ್ಯಮ ವರ್ಗಕ್ಕೆ ವಸತಿ ಯೋಜನೆ ಮೂಲಕ ಮನೆ ನೀಡಲಾಗಿದೆ.

ರೈತರಿಗೆ(Farmer) ಆಧುನಿಕ ತಂತ್ರಜ್ಞಾನದ ಸಹಾಯಕ್ಕಾಗಿ ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಲಾಗಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ. ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ ಮಾಡಲಾಗುತ್ತಿದೆ ಎಂದರು. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ನೆರವು ನೀಡಲಾಗಿದೆ. ಮತ್ಸ್ಯ ಸಂಪದ ಯೋಜನೆ ಮೂಲಕ 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಲಾಗಿದೆ.

ಅಭಿವೃದ್ಧಿಗಾಗಿ ಸರ್ಕಾರದ ಕೆಲಸ : 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಬದಲಾವಣೆ ಕಂಡಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಹಲವು ಬದಲಾವಣೆ, ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಉದ್ಯೋಗ, ಉದ್ದಿಮೆಗೆ ಹಲವು ಅವಕಾಶ ಕಲ್ಪಿಸಲಾಗಿದೆ. 2ನೇ ಅವಧಿಯಲ್ಲಿ ಎಲ್ಲಾ ಜನರ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡಿದೆ, ಮಾಡುತ್ತಿದೆ.

80 ಕೋಟಿ ಜನರಿಗೆ ಉಚಿತ ಪಡಿತರ : ಉಜ್ವಲ ಭವಿಷ್ಯಕ್ಕೆ ಮೋದಿ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿ ಗೊಳಿಸಲಾಗಿದೆ. ಕಳೆದ 10 ವರ್ಷಗಳಲ್ಲಿ ಪ್ರತಿಯೊಬ್ಬರಿಗೂ ಯೋಜನೆ ತಲುಪಿದೆ. ಎಲ್ಲರಿಗೂ ಗ್ಯಾಸ್, ನೀರು, ಬ್ಯಾಂಕ್ ಖಾತೆ ಒದಗಿಸೋ ಗುರಿಯನ್ನು ಸರ್ಕಾರ ಹೊಂದಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ಒದಗಿಸಲಾಗ್ತಿದೆ. ಅಭಿವೃದ್ಧಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಪಣ ತೊಟ್ಟಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಹಳ್ಳಿಗಳ ಅಭಿವೃದ್ಧಿ : ಕೊರೋನಾ ನಂತರ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಜನರಿಗೆ ಹೊಸ ಉದ್ಯೋಗಾವಕಾಶಗಳು ಸಿಕ್ಕಿವೆ. ನಮ್ಮ ಸರ್ಕಾರ ಯುವ ದೇಶದ ಆಕಾಂಕ್ಷೆಗಳನ್ನು ಈಡೇರಿಸಿದೆ. ನಮ್ಮ ಸರ್ಕಾರವು ಹಳ್ಳಿಗಳ ಜನರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ವಿತ್ತ ಸಚಿವೆ ಹೇಳಿದರು.

– ಅಂತರ್ಜಾಲ ಮಾಹಿತಿ(ನ್ಯೂಸ್‌ 18)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

10 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

21 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

22 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago