Advertisement
MIRROR FOCUS

1 ಕೋಟಿ ಮನೆಗಳಿಗೆ ಸೋಲಾರ್, 300 ಯೂನಿಟ್ ವಿದ್ಯುತ್ ಫ್ರೀ ಹೇಗೆ..? | ಉಚಿತ ಕಾನ್ಸೆಪ್ಟ್‌ ಬದಲಾಯಿಸಿದ್ದು ಹೇಗೆ ? |

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Minister Nirmala Sitharaman) ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಆರಂಭದಲ್ಲಿ ಸರ್ಕಾರದ (Modi Government) ಅಭಿವೃದ್ಧಿ ಕೆಲಸಗಳ ಮಾಹಿತಿಯನ್ನು ನೀಡಿದರು. ಗ್ರಾಮೀಣ(Rural) ಭಾಗದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ. ಅದರಲ್ಲಿ 1 ಕೋಟಿ ಮನೆಗಳ ಮೇಲೆ ಸೌರ ವಿದ್ಯುತ್ ಅಳವಡಿಕೆ ಮಾಡಲಾಗುತ್ತದೆ. ಉಚಿತ ಸೋಲಾರ್ ವಿದ್ಯುತ್ ಘೋಷಿಸಲಾಗಿದೆ. ಮಧ್ಯಮ ವರ್ಗಕ್ಕೆ ವಸತಿ ಯೋಜನೆ ಮೂಲಕ ಮನೆ ನೀಡಲಾಗಿದೆ.

ರೈತರಿಗೆ(Farmer) ಆಧುನಿಕ ತಂತ್ರಜ್ಞಾನದ ಸಹಾಯಕ್ಕಾಗಿ ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಲಾಗಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ. ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ ಮಾಡಲಾಗುತ್ತಿದೆ ಎಂದರು. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ನೆರವು ನೀಡಲಾಗಿದೆ. ಮತ್ಸ್ಯ ಸಂಪದ ಯೋಜನೆ ಮೂಲಕ 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಲಾಗಿದೆ.

ಅಭಿವೃದ್ಧಿಗಾಗಿ ಸರ್ಕಾರದ ಕೆಲಸ : 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಬದಲಾವಣೆ ಕಂಡಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಹಲವು ಬದಲಾವಣೆ, ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಉದ್ಯೋಗ, ಉದ್ದಿಮೆಗೆ ಹಲವು ಅವಕಾಶ ಕಲ್ಪಿಸಲಾಗಿದೆ. 2ನೇ ಅವಧಿಯಲ್ಲಿ ಎಲ್ಲಾ ಜನರ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡಿದೆ, ಮಾಡುತ್ತಿದೆ.

80 ಕೋಟಿ ಜನರಿಗೆ ಉಚಿತ ಪಡಿತರ : ಉಜ್ವಲ ಭವಿಷ್ಯಕ್ಕೆ ಮೋದಿ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿ ಗೊಳಿಸಲಾಗಿದೆ. ಕಳೆದ 10 ವರ್ಷಗಳಲ್ಲಿ ಪ್ರತಿಯೊಬ್ಬರಿಗೂ ಯೋಜನೆ ತಲುಪಿದೆ. ಎಲ್ಲರಿಗೂ ಗ್ಯಾಸ್, ನೀರು, ಬ್ಯಾಂಕ್ ಖಾತೆ ಒದಗಿಸೋ ಗುರಿಯನ್ನು ಸರ್ಕಾರ ಹೊಂದಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ಒದಗಿಸಲಾಗ್ತಿದೆ. ಅಭಿವೃದ್ಧಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಪಣ ತೊಟ್ಟಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಹಳ್ಳಿಗಳ ಅಭಿವೃದ್ಧಿ : ಕೊರೋನಾ ನಂತರ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಜನರಿಗೆ ಹೊಸ ಉದ್ಯೋಗಾವಕಾಶಗಳು ಸಿಕ್ಕಿವೆ. ನಮ್ಮ ಸರ್ಕಾರ ಯುವ ದೇಶದ ಆಕಾಂಕ್ಷೆಗಳನ್ನು ಈಡೇರಿಸಿದೆ. ನಮ್ಮ ಸರ್ಕಾರವು ಹಳ್ಳಿಗಳ ಜನರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ವಿತ್ತ ಸಚಿವೆ ಹೇಳಿದರು.

– ಅಂತರ್ಜಾಲ ಮಾಹಿತಿ(ನ್ಯೂಸ್‌ 18)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

9 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

22 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago