ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.………ಮುಂದೆ ಓದಿ……..
ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಬಸವನಗೌಡ ಬಾದರ್ಲಿ ಅವರ ಪರವಾಗಿ ಸದಸ್ಯ ಡಿ.ಟಿ ಶ್ರೀನಿವಾಸ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿರಂತರವಾಗಿ 7 ಗಂಟೆ ಕಾಲ ವಿದ್ಯುತ್ ಕೊಡಲು ಸಾಧ್ಯವಾಗದೆ ಇದ್ದರೆ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ಕ್ರಮವಾಗಿ 3 ಗಂಟೆ ಹಾಗೂ 4 ಗಂಟೆಗಳಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅಸಾಂಪ್ರದಾಯಿಕ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದಿಸುವುದನ್ನು ಪ್ರೋತ್ಸಾಹಿಸಲು ಸರ್ಕಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ ಜಾರಿಗೆ ತಂದಿದೆ. ರಾಯಚೂರು ಮತ್ತು ಕಲಬುರಗಿ ಯಲ್ಲಿ ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಮುಂಬರುವ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…