ಪಿಎಂ-ಕುಸುಮ್ ಯೋಜನೆಯ ಭಾಗವಾಗಿ 2.93 ಲಕ್ಷ ಕೃಷಿ ಪಂಪ್ ಸೆಟ್ಗಳು ಮತ್ತು ಒಟ್ಟು 1,162.8 ಮೆಗಾವ್ಯಾಟ್ ಸಾಮರ್ಥ್ಯದ 1,156 ಫೀಡರ್ಗಳನ್ನು ಸೌರಶಕ್ತಿ ಚಾಲಿತಗೊಳಿಸುವ ಗುರಿಯನ್ನು ಆಂದ್ರಪ್ರದೇಶ ಹೊಂದಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಹೇಳಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನಿರ್ದೇಶನವನ್ನೂ ನೀಡಿದ್ದಾರೆ.
ಕೇಂದ್ರ ಯೋಜನೆಯಡಿಯಲ್ಲಿ, ಈಗಾಗಲೇ ಗುರುತಿಸಲಾದ 5,842 ಎಕರೆ ಭೂಮಿಯಲ್ಲಿ 1,162.8 ಮೆಗಾವ್ಯಾಟ್ ಸೌರ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಯ ಅನುಷ್ಠಾನವು ವಿಳಂಬವಿಲ್ಲದೆ ಮುಂದುವರಿಯಲು ಆಯ್ದ ಡೆವಲಪರ್ಗಳೊಂದಿಗೆ ವಿದ್ಯುತ್ ಖರೀದಿ ಮತ್ತು ಭೂ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಬೇಕೆಂದು ಅವರು ನಿರ್ದೇಶಿಸಿದರು. 12 ತಿಂಗಳೊಳಗೆ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಆಗಬೇಕು ಎಂದೂ ಅವರು ಹೇಳಿದರು. ಕೃಷಿ ಫೀಡರ್ಗಳ ಸೋಲಾರ್ ಗೆ ವರ್ಗಾಯಿಸುವುದರಿಂದ ಸರ್ಕಾರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡುತ್ತದೆ, ರೈತರಿಗೆ ಗುಣಮಟ್ಟದ ಹಾಗೂ ಖಚಿತವಾಗಿ ಹಗಲಿನ ವಿದ್ಯುತ್ ಪೂರೈಕೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…