Advertisement
MIRROR FOCUS

ಆಂಧ್ರಪ್ರದೇಶದಲ್ಲಿ 2.93 ಲಕ್ಷ ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬಳಕೆಯತ್ತ ಹೆಜ್ಜೆ

Share

ಪಿಎಂ-ಕುಸುಮ್ ಯೋಜನೆಯ ಭಾಗವಾಗಿ 2.93 ಲಕ್ಷ ಕೃಷಿ ಪಂಪ್ ಸೆಟ್‌ಗಳು ಮತ್ತು ಒಟ್ಟು 1,162.8 ಮೆಗಾವ್ಯಾಟ್ ಸಾಮರ್ಥ್ಯದ 1,156 ಫೀಡರ್‌ಗಳನ್ನು ಸೌರಶಕ್ತಿ ಚಾಲಿತಗೊಳಿಸುವ ಗುರಿಯನ್ನು ಆಂದ್ರಪ್ರದೇಶ  ಹೊಂದಿದೆ ಎಂದು  ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಹೇಳಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನಿರ್ದೇಶನವನ್ನೂ ನೀಡಿದ್ದಾರೆ.

ಕೇಂದ್ರ ಯೋಜನೆಯಡಿಯಲ್ಲಿ, ಈಗಾಗಲೇ ಗುರುತಿಸಲಾದ 5,842 ಎಕರೆ ಭೂಮಿಯಲ್ಲಿ 1,162.8 ಮೆಗಾವ್ಯಾಟ್ ಸೌರ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಯ ಅನುಷ್ಠಾನವು ವಿಳಂಬವಿಲ್ಲದೆ ಮುಂದುವರಿಯಲು ಆಯ್ದ ಡೆವಲಪರ್‌ಗಳೊಂದಿಗೆ ವಿದ್ಯುತ್ ಖರೀದಿ ಮತ್ತು ಭೂ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಬೇಕೆಂದು ಅವರು ನಿರ್ದೇಶಿಸಿದರು. 12 ತಿಂಗಳೊಳಗೆ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಆಗಬೇಕು ಎಂದೂ ಅವರು ಹೇಳಿದರು.  ಕೃಷಿ ಫೀಡರ್‌ಗಳ ಸೋಲಾರ್‌ ಗೆ ವರ್ಗಾಯಿಸುವುದರಿಂದ ಸರ್ಕಾರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡುತ್ತದೆ, ರೈತರಿಗೆ ಗುಣಮಟ್ಟದ ಹಾಗೂ ಖಚಿತವಾಗಿ ಹಗಲಿನ ವಿದ್ಯುತ್ ಪೂರೈಕೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

15 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago