Advertisement
MIRROR FOCUS

ಬೆಂಗಳೂರಿನ ಈಜೀಪುರದ ಘನತ್ಯಾಜ್ಯ ಘಟಕ | ಪ್ರತಿನಿತ್ಯ ಸುಮಾರು 170 ಮೆಟ್ರಿಕ್ ಟನ್ ತ್ಯಾಜ್ಯ ವಿಲೇವಾರಿ

Share

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಈಜೀಪುರ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಯಶಸ್ವಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಆಯುಕ್ತ ಕೆ.ಎನ್.ರಮೇಶ್ ತಿಳಿಸಿದ್ದಾರೆ.

ಈಜಿಪುರದಲ್ಲಿರುವ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ ಸ್ವಯಂ ಚಾಲಿತ ತ್ಯಾಜ್ಯ ವಿಂಗಡಣೆ ಘಟಕಕ್ಕೆ  ಭೇಟಿ ನೀಡಿ ಘಟಕದ ಕಾರ್ಯವೈಖರಿಯನ್ನು ಅವರು ಪರಿಶೀಲನೆ ನಡೆಸಿದರು. 2024 ರ ಮಾರ್ಚ್‌ನಿಂದ ಈ ಘಟಕ ಕಾರ್ಯನಿರ್ವಹಿಸುತ್ತಿದ್ದು,  ಪ್ರತಿನಿತ್ಯ 8 ವಾರ್ಡ್‌ಗಳಿಂದ ಸುಮಾರು 160 ರಿಂದ 170 ಮೆಟ್ರಿಕ್ ಟನ್ ತ್ಯಾಜ್ಯ ಬರಲಿದೆ.  ಘಟಕದಲ್ಲಿ 35 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ತ್ಯಾಜ್ಯವನ್ನು ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಕ್ಯಾಪ್ಸೂಲ್‌ಗಳ ಮೂಲಕ ರವಾನಿಸಲಾಗುತ್ತದೆ ಎಂದು ಕೆ.ಎನ್. ರಮೇಶ್ ತಿಳಿಸಿದರು. ಘಟಕದಲ್ಲಿ 7 ಕ್ಯಾಫ್ಸೂಲ್ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಒಂದು ಕ್ಯಾಪ್ಸೂಲ್ ವಾಹನಕ್ಕೆ ಎರಡು ಕಂಟೈನರ್‌ಗಳು ಇರಲಿವೆ.  ವಾರ್ಡ್‌ಗಳಿಂದ ಆಟೋ ಟಿಪ್ಪರ್‌ಗಳ ಮೂಲಕ ಬರುವ ತ್ಯಾಜ್ಯವನ್ನು ಕಂಪ್ರೆಸ್ ಮಾಡಿ ತುಂಬುವುದರಿಂದ 1 ಕ್ಯಾಫ್ಸೂಲ್‌ನಲ್ಲಿ 16 ರಿಂದ 18 ಟನ್ ತ್ಯಾಜ್ಯವನ್ನು ತುಂಬಹುದಾಗಿದ್ದು,  ಇದರಿಂದ ಕಡಿಮೆ ವಾಹನಗಳನ್ನು ಬಳಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

15 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

16 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

16 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago