Advertisement
MIRROR FOCUS

ಕೃಷಿ ಕಾರ್ಮಿಕರ ಸಮಸ್ಯೆ ನಿವಾರಣೆಗೆ ತಂತ್ರಜ್ಞಾನದ ಬಳಕೆಯೇ ಪರಿಹಾರ |

Share

ಕೃಷಿ ಬೆಳವಣಿಗೆಯ ನಡುವೆ ಈಗ ಕಾಡುತ್ತಿರುವುದು ಕೃಷಿ ಕಾರ್ಮಿಕರ ಸಮಸ್ಯೆ. ಅದರಲ್ಲೂ ನುರಿತ ಕೃಷಿ ಕಾರ್ಮಿಕರು, ಕೌಶಲ್ಯ ಹೊಂದಿದ ಕಾರ್ಮಿಕರು ಅಪರೂಪದಲ್ಲಿ ಅಪರೂಪ. ರಾಜ್ಯದ ಎಲ್ಲಾ ಕಡೆಯೂ ಈ ಸಮಸ್ಯೆ ಇದೆ. ಈ ಸಮಸ್ಯೆ ನಿವಾರಣೆಗೆ ಕೃಷಿ ತಂತ್ರಜ್ಞಾನಗಳ ಬಳಕೆಯೇ ಪರಿಹಾರ ಎಂದು ಹಲವು ಕಡೆ ಅಭಿಪ್ರಾಯ ಕೇಳುತ್ತಿದೆ. ಹಾವೇರಿ ಜಿಲ್ಲೆಯ ಕೃಷಿಕರು ಆಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಕೃಷಿ ಕಾರ್ಮಿಕರ ಸಮಸ್ಯೆಗೆ ಸ್ವಲ್ಪಮಟ್ಟಿನ ಪರಿಹಾರ ಕಂಡುಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಹಲವೆಡೆ ರೈತರು ಆಧುನಿಕ ತಂತ್ರಜ್ಞಾನದ ಜರಡಿ ಬಳಸಿ ಸೋಯಾಬಿನ್ ಒಕ್ಕಣಿ ಮಾಡುತ್ತಿದ್ದಾರೆ. ಇಲ್ಲಿ ಕೂಡಾ ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ಉತ್ತಮ ಭತ್ಯೆ ಕೊಟ್ಟರೂ ಕೆಲಸಕ್ಕೆ ಕಾರ್ಮಿಕರು ಬರುತ್ತಿಲ್ಲ. ಹೀಗಾಗಿ ರೈತರು ಬೆಳೆ ಬೆಳೆಯಲು, ಬೆಳೆದ ಬೆಳೆಯನ್ನು ಹಸನು ಮಾಡಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ರೈತರು ಆಧುನಿಕ ತಂತ್ರಜ್ಞಾನದ ಲಾಭ ಪಡೆದುಕೊಳ್ಳುತ್ತಿದ್ದಾರೆ.

Advertisement

ಕೃಷಿ ಪ್ರಧಾನವಾದ ಹಾವೇರಿ ಜಿಲ್ಲೆಯಲ್ಲಿ ಸೋಯಾಬಿನ್, ಹತ್ತಿ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಹಾವೇರಿ ತಾಲೂಕು ಒಂದರಲ್ಲೇ 4500 ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್ ಬೆಳೆ ಬೆಳೆಯಲಾಗುತ್ತದೆ. ಹಿಂದೆ ಸೋಯಾಬಿನ್ ಬೆಳೆದ ನಂತರ ಅದರ ಒಕ್ಕಣಿ ಮಾಡಲು ಕಣಗಳಲ್ಲಿ ಬೆಳೆ ಹಾಕುತ್ತಿದ್ದರು. ಆದರೆ ಈಗ ಕಣಗಳ ಸಂಖ್ಯೆ ಕಡಿಮೆ ಆಗಿದ್ದು, ಕಾರ್ಮಿಕರ ಸಮಸ್ಯೆಯೂ ಹೆಚ್ಚಾಗಿದೆ. ಹೀಗಾಗಿ ರೈತರು ಈಗ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಪ್ರಸಕ್ತ ವರ್ಷ ಉತ್ತಮ ಮಳೆಯಾಗಿದ್ದರಿಂದ ಕಾಳುಗಳನ್ನು ಒಕ್ಕಣಿ ಮಾಡುವಾಗ ಮಣ್ಣು ಬರುತ್ತಿದೆ. ಕಾಳುಗಳಲ್ಲಿ ಮಣ್ಣು ಬೇರ್ಪಡಿಸಲು ರೈತರು ಕಷ್ಟಪಡುತ್ತಿದ್ದರು. ಹೀಗಾಗಿ ಜರಡಿ ಬಳಕೆಗೆ ಬಂದ ಮೇಲೆ ಮಣ್ಣಿನಿಂದ ಸುಲಭವಾಗಿ ಕಾಳುಗಳನ್ನು ಬೇರ್ಪಡಿಸಿ ಲಾಭ ಪಡೆಯುತ್ತಿದ್ದಾರೆ. ಸ್ಪೆರೊ ಸಪರೇಟರ್ ಎಂಬ ಹೆಸರಿನ ಈ ಜರಡಿ ಬಳಕೆಯಿಂದ ರೈತರಿಗೆ ಸೋಯಾಬಿನ್ ಒಕ್ಕಣೆ ಮಾಡುವುದು ಬಲು ಸುಲಭವಾಗಿದೆ. ಕಡಿಮೆ ಖರ್ಚು ಮತ್ತು ಕಡಿಮೆ ಕಾರ್ಮಿಕರ ಬಳಕೆ ಜೊತೆಗೆ ಸಮಯವೂ ಉಳಿತಾಯ ಆಗಲಿದೆ.

ಕೃಷಿಯಲ್ಲಿ ಈಚೆಗೆ ತಂತ್ರಜ್ಞಾನಗಳ ಬಳಕೆ ಹೆಚ್ಚಾಗಬೇಕು ಎನ್ನುವ ಮಾತುಗಳು ಕೇಳುತ್ತಿವೆ. ಆದರೆ ಹೊಸ ಹೊಸ ತಂತ್ರಜ್ಞಾನಗಳು ಬಂದಾಗ ಅದರ ಪರಿಚಯದ ಜೊತೆಗೆ ಸಾಧಕ ಬಾಧಕಗಳ ಬಗ್ಗೆಯೂ ರೈತರಿಗೆ   ಅರಿವು ಮೂಡಿಸಬೇಕಿದೆ.

Advertisement
ಸ್ಪೆರೋ ಸಫರೇಟರ್ ತಂತ್ರಜ್ಞಾನದಿಂದ ಬಳಕೆಯಿಂದ ರೈತರಿಗೆ ತುಂಬಾ ಅನುಕೂಲವಾಗುತ್ತಿದೆ. ಉತ್ತಮ ಗುಣಮಟ್ಟದ ಕಾಳುಗಳನ್ನು ಪಡೆದು ಮಾರುಕಟ್ಟೆಯಲ್ಲಿ ಉತ್ತಮ ದರ ಪಡೆಯಲು ನೆರವಾಗಿದೆ ಎನ್ನುತ್ತಾರೆ ರೈತ ವೀರಭದ್ರಪ್ಪ ಹೇಳುತ್ತಾರೆ
.

Advertisement
2.5 ಎಕ್ರೆ ಜಮೀನಿನಲ್ಲಿ ಸೋಯಾಬಿನ್ ಬೆಳೆದಿದ್ದೇವು. ಒಕ್ಕಣಿಗೆ ಮೊದಲು ಐದಾರು ಕಾರ್ಮಿಕರು ಬೇಕಾಗಿತ್ತು. ಆದರೆ ಈಗ ಒಬ್ಬರೇ ಇದ್ದರೂ ಜರಡಿ ಬಳಸಿ ಒಕ್ಕಣಿ ಮಾಡಬಹುದು. ಆಧುನಿಕ ಜರಡಿಯಿಂದ ಕೆಲಸವೂ ಬೇಗ ಆಗುತ್ತದೆ ಸುಲಭವಾಗಿ ಕಾಳುಗಳಿಂದ ಮಣ್ಣನ್ನು ತೆಗೆಯಬಹುದು ಎನ್ನುತ್ತಾರೆ ರೈತ ರಾಜು ದೊಡ್ಡಮನಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

3 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago