ಕೃಷಿ ಪಂಪ್ ಸೆಟ್ ಗಳಿಗೆ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು | ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ |

September 10, 2024
8:01 AM

ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.

Advertisement

ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪಂಪ್ ಸೆಟ್ ಗಳ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು. ಕೃಷಿ ಪಂಪ್ ಸೆಟ್ ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಬರ. ಅತಿವೃಷ್ಟಿ ಹಾನಿ. ಪ್ರವಾಹ ಹಾನಿ. ಎನ್ ಡಿ ಆರ್ ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿರುವುದು ನಿಲ್ಲಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group