ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪಂಪ್ ಸೆಟ್ ಗಳ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು. ಕೃಷಿ ಪಂಪ್ ಸೆಟ್ ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಬರ. ಅತಿವೃಷ್ಟಿ ಹಾನಿ. ಪ್ರವಾಹ ಹಾನಿ. ಎನ್ ಡಿ ಆರ್ ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿರುವುದು ನಿಲ್ಲಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…