ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪಂಪ್ ಸೆಟ್ ಗಳ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು. ಕೃಷಿ ಪಂಪ್ ಸೆಟ್ ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಬರ. ಅತಿವೃಷ್ಟಿ ಹಾನಿ. ಪ್ರವಾಹ ಹಾನಿ. ಎನ್ ಡಿ ಆರ್ ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿರುವುದು ನಿಲ್ಲಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…