ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದ್ದು, ನಿರೀಕ್ಷೆ ಹುಟ್ಟಿಸಿದೆ. ಈಗ ಕಾಂಗ್ರೆಸ್ ಪಕ್ಷ ಎಲ್ಲಾ ತಮ್ಮ ಜವಾಬ್ದಾರಿಗಳನ್ನು ಕರ್ನಾಟಕ ನಾಯಕರ ಮೇಲೆ ಭರವಸೆ ಇಟ್ಟು ಅವರ ಪಾಲಿಗೆ ನೀಡುತ್ತಿದೆ. ಸೋಮವಾರ ಮತ್ತು ಮಂಗಳವಾರ ರಾಜಧಾನಿ ಬೆಂಗಳೂರಿನಲ್ಲಿ #Bengaluru ವಿರೋಧ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ #SoniaGandhi ಸಹ ಭಾಗಿಯಾಗಿದ್ದರು.
ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯ ಟಾರ್ಗೆಟ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳನ್ನ ಗೆದ್ದಿತ್ತು. ಕಾಂಗ್ರೆಸ್ ಒಂದರಲ್ಲಿ ಮಾತ್ರ ಗೆಲುವು ಕಂಡಿತ್ತು. ಈ ಬಾರಿ ರಾಜ್ಯದಲ್ಲಿ ಬಹುಮತದ ನಮ್ಮದೇ ಸರ್ಕಾರ ಇದೆ. ಹಾಗಾಗಿ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ರೀತಿ ರಣನೀತಿ ರೂಪಿಸಿ ಎಂದು ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಸೋನಿಯಾ ಗಾಂಧಿ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಲೋಕ ಸಮರದ ಟಾರ್ಗೆಟ್ ನೀಡಿದ್ದಾರೆ ಎಂದು ಹೇಳಲಾಗಿದೆ.
ಸೋನಿಯಾ ಗಾಂಧಿ ಸೂಚನೆ:ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದೆ. ಉಳಿದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರವಿದ್ದು, ಗ್ಯಾರಂಟಿ ಯೋಜನೆಗಳನ್ನ ಪರಿಣಾಮಕಾರಿಯಾಗಿ ಜಾರಿಗೊಳಿಸಿ ಎಂದು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ .
ಕಳೆದ ಬಾರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿ 25 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ತೆರೆಯ ಹಿಂದೆ ಸರಿದಿದ್ದಾರೆ. ರಾಜ್ಯದ ಪ್ರಮುಖ ನಾಯಕರೆಲ್ಲಾ ಚುನಾವಣೆಯಲ್ಲಿ ಸೋತಿದ್ದಾರೆ.
ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…