Advertisement
ಸುದ್ದಿಗಳು

#LoksabhaElection2024 | ಸಿದ್ದರಾಮಯ್ಯ, ಡಿಕೆಶಿಗೆ ಸೋನಿಯಾ ಗಾಂಧಿಯಿಂದ ಜವಾಬ್ದಾರಿ | ಬಿಜೆಪಿಗೂ ಕರ್ನಾಟಕವೇ ಟಾರ್ಗೆಟ್ |

Share

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದ್ದು, ನಿರೀಕ್ಷೆ ಹುಟ್ಟಿಸಿದೆ. ಈಗ ಕಾಂಗ್ರೆಸ್ ಪಕ್ಷ ಎಲ್ಲಾ ತಮ್ಮ ಜವಾಬ್ದಾರಿಗಳನ್ನು ಕರ್ನಾಟಕ ನಾಯಕರ ಮೇಲೆ ಭರವಸೆ ಇಟ್ಟು ಅವರ ಪಾಲಿಗೆ ನೀಡುತ್ತಿದೆ. ಸೋಮವಾರ ಮತ್ತು ಮಂಗಳವಾರ ರಾಜಧಾನಿ ಬೆಂಗಳೂರಿನಲ್ಲಿ #Bengaluru ವಿರೋಧ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ #SoniaGandhi  ಸಹ ಭಾಗಿಯಾಗಿದ್ದರು.

ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯ ಟಾರ್ಗೆಟ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳನ್ನ ಗೆದ್ದಿತ್ತು. ಕಾಂಗ್ರೆಸ್ ಒಂದರಲ್ಲಿ ಮಾತ್ರ ಗೆಲುವು ಕಂಡಿತ್ತು. ಈ ಬಾರಿ ರಾಜ್ಯದಲ್ಲಿ ಬಹುಮತದ ನಮ್ಮದೇ ಸರ್ಕಾರ ಇದೆ. ಹಾಗಾಗಿ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ರೀತಿ ರಣನೀತಿ ರೂಪಿಸಿ ಎಂದು ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಸೋನಿಯಾ ಗಾಂಧಿ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಲೋಕ ಸಮರದ ಟಾರ್ಗೆಟ್ ನೀಡಿದ್ದಾರೆ ಎಂದು ಹೇಳಲಾಗಿದೆ.

ಸೋನಿಯಾ ಗಾಂಧಿ ಸೂಚನೆ:ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದೆ. ಉಳಿದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರವಿದ್ದು, ಗ್ಯಾರಂಟಿ ಯೋಜನೆಗಳನ್ನ ಪರಿಣಾಮಕಾರಿಯಾಗಿ ಜಾರಿಗೊಳಿಸಿ ಎಂದು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ .

ಬಿಜೆಪಿಗೂ ಕರ್ನಾಟಕವೇ ಟಾರ್ಗೆಟ್: ದಕ್ಷಿಣ ಭಾರತದಲ್ಲೂ ಬಿಜೆಪಿಗೂ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಪ್ರಾಬಲ್ಯತೆ ಇಲ್ಲ. ವಿಧಾನಸಭೆ ಚುನಾವಣಾ ಸೋಲು ಬಿಜೆಪಿ ಹೈಕಮಾಂಡ್ ನಿದ್ದೆಗೆಡಿಸಿದೆ. ಕಾಂಗ್ರೆಸ್​ ಗ್ಯಾರಂಟಿಗಳ ಜನಪ್ರಿಯತೆ ನಡುವೆ 20 ಕ್ಷೇತ್ರದಲ್ಲಿ ಗೆಲ್ಲಲು ಬಿಜೆಪಿ ಸಹ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕಳೆದ ಬಾರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿ 25 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ತೆರೆಯ ಹಿಂದೆ ಸರಿದಿದ್ದಾರೆ. ರಾಜ್ಯದ ಪ್ರಮುಖ ನಾಯಕರೆಲ್ಲಾ ಚುನಾವಣೆಯಲ್ಲಿ ಸೋತಿದ್ದಾರೆ.

ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

6 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

13 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago