Advertisement
ಸುದ್ದಿಗಳು

ಬಂಟ್ವಾಳದ ಅಭಿಮಾನಿಗೆ ಬಾಲಿವುಡ್ ನಟ ಸೋನು ಸೊದ್ ನ ಅಭಿನಂದನೆ

Share
ಬಡವರ ಪಾಲಿಗೆ ಮನೆ ಮಗನಾಗಿ,ದೇಶದ ರಿಯಲ್  ಹೀರೋ ಎಂದು ಕರೆಸಿಕೊಂಡು  ಸಿನಿಮಾದಲ್ಲಿ ಕಳನಾಯಕನಾಗಿ ಅಭಿನಯಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್ ಕೋರೋನ ಸಂಕಷ್ಟದ ಸಂದರ್ಭದಲ್ಲಿ ಅನೇಕ ಬಡ ಕುಟುಂಬಗಳಿಗೆ ನೆರವಾಗಿದ್ದು ಅವರ ನಿಕಲ್ಮಷ ಸೇವೆಗೆ ಬಂಟ್ವಾಳದ ಅಭಿಮಾನಿಯೊಬ್ಬರು ಅವರ ಕಾರಿನ ಮೈಮೇಲೆ ಸೋನು ಸೂದ್ ಭಾವಚಿತ್ರಗಳ ಹಚ್ಚೆ ಹಾಕಿಸಿ ವಿಶೇಷ ರೀತಿಯ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ.
ಕೊರೋನ ಎಂಬ ಕಾಣದ ವೈರಸ್ ಅದೆಷ್ಟೋ ಜನರ ಪಾಲಿಗೆ ಯಮನಾಗಿ ಬಡ ಕುಟುಂಬಗಳ ಜೀವನಕೆ ಹೆಮ್ಮರಿಯಂತೆ ವಕ್ಕರಿಸಿದ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ನೊಂದವರ ಪಾಲಿಗೆ ಮನೆ ಮಗನಂತೆ ಎಲ್ಲರ ಕಷ್ಟಕ್ಕೆ ಸ್ಪಂದಿಸಿದ ನಟ ಸೋನು ಸೂದ್ ಕಳೆದ ವರುಷ ಲಾಕ್ ಡೌನ್ ಆರಂಭವಾದ ನಂತರ ಜನಸಾಮಾನ್ಯರಿಗೆ ಸಹಾಯ ಮಾಡುತ್ತಾ ಬಂದಿದ್ದಾರೆ  ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ವ್ಯವಸ್ಥೆ , ಆಕ್ಸಿ ಜನ್ ಅಗತ್ಯ ಇದವರಿಗೆ ನೆರವಾಗಿ ಬೆಡ್ ವ್ಯವಸ್ಥೆ ಮಾಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಒಂದು ಕೋಟಿ ರೂ. ಗೂ ಅಧಿಕ ಉತ್ಪಾದನಾ ಘಟಕ ಕ್ಕೆ ಶೇ .80 ರಷ್ಟು ನೆರವು ನೀಡುವ ಮೂಲಕ ಲಕ್ಷಾಂತರ ಜನರ ಪ್ರೀತಿ , ಆಶೀರ್ವಾದಕೆ ಪಾತ್ರರಾಗಿ ಯುವಕರಿಗೆ ಮತ್ತು ಅವರ ಅಭಿಮಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ .
ಸೂದ್ ಅವರ ಅನೇಕ ಸಮಾಜ ಸೇವೆಗೆ ಶರಣಾಗಿ ರಿಯಲ್ ಹೀರೋನ ಅಭಿಮಾನಿ ಯದವರಲ್ಲಿ ಕರಾವಳಿಯ ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ಶ್ರೀ ಪ್ರಸಾದ್ ಆಚಾರ್ಯ ಕೂಡ ಒಬ್ಬರು ಶ್ರೀ ಟಾಕೀಸ್ ಸ್ಟುಡಿಯೋ ನಡೆಸುತ್ತಾ ಫೋಟೋ/ವಿಡಿಯೋಗ್ರಾಫರ್ ಕಿರುಚಿತ್ರ,ಸಂಗೀತ,ಆಲ್ಬಂ ಚಿತ್ರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೆಸರಾದ ಇವರು ತಮ್ಮ ಇಯನ್ ಕಾರಿನ ಬಲ ಎಡ ಭಾಗಗಳಲ್ಲಿ ಹಿಂದಿನ ಗಾಜು ತುಂಬೆಲ್ಲ ಕೋವಿಡ್ ಸೇವೆಗಳ ವಿವರ ಹಾಗೂ ಸೋನು ಘೋಷಣೆಯಾದ ‘ನಾನು ಇರುವುದು ರಾಜಕೀಯ ಕ್ಕಾಗಿ ಅಲ್ಲ ಬದಲು ಹೃದಯಗಳ ಗೆಲ್ಲಲು’ ಎಂಬ ಮಾತಿನಂತೆ ಬರಹಗಳನ್ನು ಬರೆಸುವ ಮೂಲಕ ಅಭಿಮಾನಿಯಾಗಿ ಪ್ರೀತಿಯ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ  ಪ್ರಸಾದ್ ಸಹೋದರಿ ಸತ್ ನೀಡಿದ್ದು ಅವರ ಅಭಿಮಾನಕ್ಕೆ ಸೋನು ಸೂದ್ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ .
# ಸುಕನ್ಯ ಎನ್. ಆರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

12 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

13 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

13 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

13 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

13 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

21 hours ago