ಕೇರಳದಾದ್ಯಂತ ನೈಋತ್ಯ ಮಾನ್ಸೂನ್ ತೀವ್ರಗೊಂಡಿದ್ದು, ಮುಂದಿನ ಐದು ದಿನಗಳಲ್ಲಿ ವ್ಯಾಪಕ ಮಳೆ ಮತ್ತು ಗಾಳಿ ಬೀಸುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಸಮುದ್ರದ ಪ್ರಕ್ಷುಬ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ ಹೊರಾಂಗಣಕ್ಕೆ ನೀರು ನುಗ್ಗಿದೆ. ಸದ್ಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನಲ್ಲಿ ತೆರಳಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ. ಕೊಟ್ಟಾಯಂ ಟೋಲ್ ಪ್ಲಾಜಾದಲ್ಲಿ ಆಟೋ ರಿಕ್ಷಾಗಳ ಮೇಲೆ ಮರ ಬಿದ್ದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel