ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಯಚೂರಿನಲ್ಲಿ ಅತೀ ಹೆಚ್ಚು 11 ಸೆಂಟಿಮೀಟರ್ ಮಳೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ತೊಂಡೆಭಾವಿ 7, ಹೊನ್ನಾವರ ಮತ್ತು ಗೇರುಸೊಪ್ಪ ತಲಾ 6 ಸೆಂಟಿ ಮೀಟರ್, ಕುಂದಾಪುರ ಮತ್ತು ಭಾಗಮಂಡಲ ತಲಾ 5 ಸೆಂಟಿ ಮೀಟರ್, ನಾಪೋಕ್ಲು, ಆಗುಂಬೆ, ಮಂಗಳೂರು, ಬಾದಾಮಿ, ವಿಜಯಪುರ, ಮಂಕಿ, ಶಕ್ತಿನಗರ ಮತ್ತು ಕೋಟಾದಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ.
ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ರಾಜ್ಯದ ಕರಾವಳಿಯಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಸಾಧಾರಣ ಮಳೆಯಾಗುವ ಸಂಭವ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…