“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

May 18, 2026
10:14 PM
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ನೈರುತ್ಯ ಮುಂಗಾರು ಈ ತಿಂಗಳ 26 ರಂದು ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆ ಇದ್ದು, ಸಾಮಾನ್ಯವಾಗಿ ಜೂನ್ 1 ರಂದು ಆರಂಭವಾಗುವ ಮುಂಗಾರು ಈ ಬಾರಿ 6 ದಿನ ಮುಂಚಿತವಾಗಿಯೇ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ ಎರಡು-ಮೂರು ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ಬಂಗಾಳಕೊಲ್ಲಿ, ಅಂಡಮಾನ್ ದ್ವೀಪಗಳು ಹಾಗೂ ಅಂಡಮಾನ್ ಸಮುದ್ರದ ಹೆಚ್ಚಿನ ಭಾಗಗಳತ್ತ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

Advertisement

ಕರ್ನಾಟಕದಲ್ಲೂ ಮಳೆ ಚಟುವಟಿಕೆಗಳು ವೇಗ ಪಡೆಯುತ್ತಿದ್ದು, ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿಯ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ನಿನ್ನೆ ಮಳೆಯಾಗಿದೆ.

ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಗಾಳಿ, ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement

ಮುಂಗಾರು ಮುಂಚಿತ ಆಗಮನದಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಸಿಗುವ ನಿರೀಕ್ಷೆ ಇದ್ದರೂ, ಗುಡುಗು-ಸಿಡಿಲು ಹಾಗೂ ಭಾರೀ ಗಾಳಿಯಿಂದ ಸಾರ್ವಜನಿಕರು ಮತ್ತು ರೈತರು ಎಚ್ಚರಿಕೆಯಿಂದಿರಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

The India Meteorological Department has predicted that the southwest monsoon may reach Kerala by May 26, six days earlier than normal. Heavy rain is likely in coastal Karnataka, and fishermen have been warned not to venture into the sea due to rough weather conditions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror