MIRROR FOCUS

ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಮಳೆ ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಎರ್ನಾಕುಲಂ ಜಿಲ್ಲೆಯ ಸಹಿತ ವಿವಿಧ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಹಲವು ದಿನಗಳಿಂದ ಕೇರಳದ ವಿವಿದಡೆ ನಿರಂತರ ಮಳೆಯಾಗುತ್ತಿದೆ.ಮುಂದಿನ  2-3 ದಿನಗಳಲ್ಲಿ ಕೇರಳ ಜಿಲ್ಲೆಯ  ಕೆಲವು ಸ್ಥಳಗಳಲ್ಲಿ “ಭಾರೀ ಮಳೆ”ಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೋಝಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಲಘು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಮುನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು  ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮಣ್ಣಿನ ಕುಸಿತದ ಬಗ್ಗೆ ಜನರನ್ನು ಎಚ್ಚರಿಸಿದೆ ಮತ್ತು ಅಗತ್ಯವಿದ್ದಲ್ಲಿ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದೆ. ಗುಡ್ಡಗಾಡು ಪ್ರದೇಶಗಳ ಮೂಲಕ ರಾತ್ರಿ ಪ್ರಯಾಣವನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂ.3  ಕಣ್ಣೂರು, ಜೂ.4 ತ್ರಿಶೂರ್‌, ಜೂ.5 ಎರ್ನಾಕುಳಂ, ಇಡುಕ್ಕಿ , ಜೂ.6  ಕಾಸರಗೋಡುವರೆಗಿನ ಕರಾವಳಿ ತೀರ ಪ್ರದೇಶದಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ.

Due to the southwest monsoon causing widespread rainfall across Kerala, the India Meteorological Department (IMD) issued an orange alert for Ernakulam district on Sunday, following days of continuous heavy rains in the area.

Advertisement
 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

56 minutes ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

4 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

10 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

18 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

18 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

19 hours ago