ಮುಂಗಾರು ಮಳೆ ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಎರ್ನಾಕುಲಂ ಜಿಲ್ಲೆಯ ಸಹಿತ ವಿವಿಧ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಹಲವು ದಿನಗಳಿಂದ ಕೇರಳದ ವಿವಿದಡೆ ನಿರಂತರ ಮಳೆಯಾಗುತ್ತಿದೆ.ಮುಂದಿನ 2-3 ದಿನಗಳಲ್ಲಿ ಕೇರಳ ಜಿಲ್ಲೆಯ ಕೆಲವು ಸ್ಥಳಗಳಲ್ಲಿ “ಭಾರೀ ಮಳೆ”ಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೋಝಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಲಘು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಮುನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮಣ್ಣಿನ ಕುಸಿತದ ಬಗ್ಗೆ ಜನರನ್ನು ಎಚ್ಚರಿಸಿದೆ ಮತ್ತು ಅಗತ್ಯವಿದ್ದಲ್ಲಿ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದೆ. ಗುಡ್ಡಗಾಡು ಪ್ರದೇಶಗಳ ಮೂಲಕ ರಾತ್ರಿ ಪ್ರಯಾಣವನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂ.3 ಕಣ್ಣೂರು, ಜೂ.4 ತ್ರಿಶೂರ್, ಜೂ.5 ಎರ್ನಾಕುಳಂ, ಇಡುಕ್ಕಿ , ಜೂ.6 ಕಾಸರಗೋಡುವರೆಗಿನ ಕರಾವಳಿ ತೀರ ಪ್ರದೇಶದಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
Due to the southwest monsoon causing widespread rainfall across Kerala, the India Meteorological Department (IMD) issued an orange alert for Ernakulam district on Sunday, following days of continuous heavy rains in the area.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…