ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ 2ಸಾವಿರ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಅ 30 ರಿಂದ ನ.1 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಹೆಚ್ಚುವರಿ ವಾಹನಗಳು ಸಂಚಾರ ಪ್ರಾರಂಭಿಸಲಿವೆ.
ತಮಿಳುನಾಡು ಹಾಗೂ ಕೇರಳ ಕಡೆಗೆ ತೆರಳುವ ಬಸ್ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ. ಪ್ರಯಾಣಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇದಲ್ಲದೇ ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ 4 ರಂದು ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗುವುದು. www.ksrtc.karnataka.gov.in ವೆಬ್ಸೈಟ್ ಮುಖಾಂತರ ಇ-ಟಿಕೆಟ್ ಬುಕ್ಕಿಂಗ್ಅನ್ನು ಮಾಡಬಹುದಾಗಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಇದಲ್ಲದೇ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…